ಬೆಂಗಳೂರು | ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ ₹5 ಕೋಟಿ ನಷ್ಟ

Date:

Advertisements

ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ, ₹5 ಕೋಟಿಗೂ ಹೆಚ್ಚಿನ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  

ಗೋದಾಮಿನ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್​ ಡಿಕ್ಕಿ ಹೊಡೆದಿದೆ. ಈ ವೇಳೆ, ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ಎಎಸ್‌ಆರ್‌ ಮಾರ್ಕೆಟಿಂಗ್ ಮತ್ತು ಯುನಿಕಾರ್ನ್‌ ಮಾರ್ಕೆಟಿಂಗ್ ಎಂಬ ಹೆಸರಿನ ಗೋದಾಮಿಗೆ ಸಂಪರ್ಕಿಸಿದ್ದ ವಿದ್ಯುತ್ ​​​ತಂತಿಯಿಂದ ಶಾರ್ಟ್​ಸರ್ಕ್ಯೂಟ್ ಉಂಟಾಗಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಗೋದಾಮಿ​ನಲ್ಲಿ 100ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದರು. ಆದರೆ, ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ವಾಹನಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಆದರೆ, 20 ನಿಮಿಷಗಳಲ್ಲಿ ದಾಖಲೆಗಳನ್ನು ಒಳಗೊಂಡಿರುವ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಹೊರತುಪಡಿಸಿ, ₹5 ಕೋಟಿಗೂ ಹೆಚ್ಚು ಮೌಲ್ಯದ ಪಾದರಕ್ಷೆಗಳು ಸುಟ್ಟುಹೋದವು ಎಂದು ತಿಳಿದುಬಂದಿದೆ.

Advertisements

“₹20 ಲಕ್ಷ ಮೌಲ್ಯದ ಪಾದರಕ್ಷೆಗಳನ್ನು ಗೋದಾಮಿಗೆ ವ್ಯವಸ್ಥಾಪಕ ಶ್ರೀನಿವಾಸ್ ಅವರು ಮುಂದೆ ನಿಂತು ಇಳಿಸಿದ್ದಾರೆ. ಅವರು ಹೋದ ಸ್ವಲ್ಪ ಸಮಯದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನ ಗೇಟ್ ಬಳಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ, ಕಳಪೆ  ಗುಣಮಟ್ಟದ ವಿದ್ಯುತ್ ಕಂಬ ಮುರಿದು ಬಿದ್ದಿದೆ” ಎಂದು ಯೂನಿಕಾರ್ನ್ ಮಾರ್ಕೆಟಿಂಗ್‌ನ ವ್ಯವಸ್ಥಾಪಕರ ಪತ್ನಿ ಮತ್ತು ಉದ್ಯೋಗಿಯೂ ಆಗಿರುವ ಅಂಬಿಕಾ ಶ್ರೀನಿವಾಸ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’ ಪ್ರಾರಂಭ

ವಿದ್ಯುತ್ ಕಂಬವು ರಸ್ತೆಯ ಮೇಲೆ ಕುಸಿದು ಬಿದ್ದಿದ್ದು, ವೈರಿಂಗ್ ಸಡಿಲಗೊಂಡಿದ್ದರಿಂದ ಗೋದಾಮಿನೊಳಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಮತ್ತು ಬಹುತೇಕ ಅಂಗಡಿಗಳಿಗೆ ಶೂ, ಚಪ್ಪಲಿಗಳು ಈ ಗೋದಾಮಿನಿಂದಲೇ ಪೂರೈಕೆ ಆಗುತ್ತಿದ್ದವು. ಹೀಗಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಪ್ಪಲಿ ಶೂಗಳನ್ನು ಇಲ್ಲಿ ಶೇಖರಿಸಿ ಇಡಲಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X