ಚೈತ್ರಾ ಕುಂದಾಪುರ ಡೀಲ್ ಪ್ರಕರಣ | ಗೋವಿಂದ ಬಾಬು ಪೂಜಾರಿಗೆ ಮೋಸ‌ ಆಗಿದೆ: ಸಿ ಟಿ ರವಿ

Date:

Advertisements
  • ಸಮಗ್ರ ತನಿಖೆ ಆಗಬೇಕು, ಇದರ ಹಿಂದೆ ಯಾರೇ ಇದ್ದರೂ ಕ್ರಮ ಕೈಗೊಳ್ಳಬೇಕು
  • ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ: ರವಿ

ಬಿಜೆಪಿಯಲ್ಲಿ ಹಣವೇ ಪ್ರಧಾನವಲ್ಲ. ಹೀಗಾಗಿಯೇ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು ಆಗಿದ್ದಾರೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

“ಬೈಂದೂರು ಬಿಜೆಪಿ ಟಿಕೆಟ್​​ಗಾಗಿ ಚೈತ್ರಾ ಕುಂದಾಪುರ ಕೋಟಿ ಕೋಟಿಗೆ ಡೀಲ್ ಮಾಡಿಕೊಂಡಿರುವ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರು ನಾಯಕರಾಗುತ್ತಿರಲಿಲ್ಲ” ಎಂದರು.

ಗೋವಿಂದ ಬಾಬು ಪೂಜಾರಿ ಅವರೇ ಬಿಜೆಪಿ ನಾಯಕರ ಜೋತೆ ನೇರವಾಗಿ ಫೋನ್ ಮಾಡಿ ಮಾತನಾಡುವ ಅವಕಾಶ ಇತ್ತು. ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಮೋಸ‌ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ. ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನೋದು ಬೇರೆ. ಮೊದಲು ಸಮಗ್ರ ತನಿಖೆ ಆಗಲಿ” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

“ದಕ್ಷಿಣ ಕನ್ನಡ ಮತ್ತು ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳು ಭಾಷೆಯಲ್ಲೇ ಮಾತಾಡುತ್ತಿದ್ದರು. ನಳಿನ್ ಕುಮಾರ್ ಕಟೀಲ್, ಕೋಟಾ ಶ್ರೀನಿವಾಸ ಪೂಜಾರಿಯೂ ಮಾತಾಡುತ್ತಿದ್ದರು” ಎಂದರು.

ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯ

“ನಾವು ಪರಿಷತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುತ್ತಿದೆ. ಆದರೆ ಅಂತಿಮ ಆಗಿಲ್ಲ. ಹಾಗಾಗಿ‌ ಅದು ವರಿಷ್ಠರ ತೀರ್ಮಾನ, ನಾವು ಚುನಾವಣೆಗೆ ನಮ್ಮ ಹಂತದಲ್ಲಿ ಸಿದ್ಧವಾಗುತ್ತಿದ್ದೇವೆ. ಈ ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯವಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X