ಉತ್ತರ ಪ್ರದೇಶ | ಅಮೇಥಿಯಲ್ಲಿ ಅಡ್ಡಗೋಡೆಯಿಲ್ಲದೆ ಶೌಚಾಲಯ ನಿರ್ಮಾಣ; ವಿಡಿಯೋ ವೈರಲ್

Date:

Advertisements

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ ಯಾವುದೇ ಅಡ್ಡ ಗೋಡೆ ನಿರ್ಮಿಸದೆ ಒಂದರ ಪಕ್ಕ ಒಂದರ ಹಾಗೆ ನಾಲ್ಕು ಸಾರ್ವಜನಿಕ ಶೌಚಾಲಯ ನಿರ್ಮಿಸಿರುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯು ಅಮೇಥಿಯ ಜಗದೀಶು‌ ಬ್ಲಾಕ್‌ನ ಕಟೇ ಗ್ರಾಮದಿಂದ ವರದಿಯಾಗಿದ್ದು, ಇಲ್ಲಿನ ಸಾರ್ವಜನಿಕ ಶೌಚಾಲಯವನ್ನು ಭಾರೀ ಮೊತ್ತ ವ್ಯಯಿಸಿ ನಿರ್ಮಿಸಲಾಗಿದೆ. ಈ ಸಾರ್ವಜನಿಕ ಶೌಚಾಲಯವನ್ನು ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದರೂ, ಈ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿನ ಎಲ್ಲ ನಾಲ್ಕು ಶೌಚಾಸನಗಳಲ್ಲಿ ಕಸ ಮೆತ್ತಿಕೊಂಡಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ, ಈ ವಿಚಿತ್ರ ಸಾರ್ವಜನಿಕ ಶೌಚಾಲಯವನ್ನು ಯಾಕೆ ವಿಶ್ವದ 8ನೇ ಅದ್ಭುತವೆಂದು ಘೋಷಿಸಬಾರದು ಎಂದು ಅಮೇಥಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾಡಿದೆ. ಈ ಘಟನೆಗೆ ಉತ್ತರದಾಯಿತ್ವವನ್ನು ಆಗ್ರಹಿಸಿರುವ ಕಾಂಗ್ರೆಸ್ ಈ ಲೋಪಕ್ಕೆ ಗುತ್ತಿಗೆದಾರ, ಅಧಿಕಾರಿಗಳು ಅಥವಾ ಕೇಂದ್ರ ಸಚಿವರೇ ಕಾರಣವೇ ಎಂದು ಪ್ರಶ್ನಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ್ ಯಾದವ್, ಈ ಸಾರ್ವಜನಿಕ ಶೌಚಾಲಯಗಳು ಹಳತಾಗಿದ್ದು, ಹೊಸ ಸಾರ್ವಜನಿಕ ಶೌಚಾಲಯವನ್ನು ಗ್ರಾಮದ ಬೇರೆ ಕಡೆ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಹಳತಾದ ಸಾರ್ವಜನಿಕ ಶೌಚಾಲಯದಿಂದ ಶೌಚಾಸನಗಳನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದ್ದರೂ, ಯೋಜನೆಯಂತೆ ಈ ಆದೇಶ ಕಾರ್ಯಗತವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X