ಸಚಿವ ಮಧು ಬಂಗಾರಪ್ಪರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

Date:

Advertisements
  • ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ
  • ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ದೂರು ನೀಡುವೆ ಎಂದ ಸ್ವಾಮೀಜಿ

ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಕೊಲೆ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸ್ವಾಮೀಜಿ, “ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ ದೂರು ನೀಡುವೆ” ಎಂದಿದ್ದಾರೆ.

“ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿಲ್ವಾ? ಈಡಿಗ ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು?” ಎಂದು ಪ್ರಶ್ನಿಸಿದರು.

Advertisements

“ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ. ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನಾರಾಯಣ ಗುರು ರಥ ಬಂದಾಗ ಒಂದೇ ಒಂದು ಹಾರವನ್ನು ಮಧು ಬಂಗಾರಪ್ಪ ಹಾಕಿದರಾ. ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ ಕೆ ಹರಿಪಸ್ರಾದ್ ಭೂಮಿ ಕಳ್ಳತನ ಮಾಡಿದವರಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಮೂವರು ಡಿಸಿಎಂ ನೇಮಕ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇವೆ: ಸಚಿವ ಕೆ ಎನ್ ರಾಜಣ್ಣ

“ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ಅವರಿಗೆ ಹಕ್ಕು ಕೊಟ್ಟವರು ಯಾರು. ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೇ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆ. ಸಮುದಾಯಕ್ಕೆ ನಿಮ್ಮ ಸಾಧನೆ ಏನು? ಈಗ ಜೆಡಿಎಸ್​ನಿಂದ ಕಾಂಗ್ರೆಸ್ಸಿಗೆ ಬಂದಿದ್ದೀರಾ. ಮುಂದೆ ಯಾವ ಪಕ್ಷಕ್ಕೆ ಹೋಗುತ್ತೀರಾ ಅಂತ ಗೊತ್ತಿಲ್ಲ” ಎಂದು ಕಿಡಿಕಾರಿದರು.

“ಸಿಎಂ ಸಿದ್ದರಾಮಯ್ಯನವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು. ಸ್ಪೀಕರ್ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ಧ ದೂರು ಕೊಡುತ್ತೇವೆ. ಕಾನೂನು ಹೋರಾಟ ಕೂಡ ಮಾಡುತ್ತೇವೆ” ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಸಿದರು.

ಯಾರಿಗೆ ಬೇಕಾದರೂ ದೂರು‌ ಕೊಡಲಿ: ಮಧು ಬಂಗಾರಪ್ಪ

ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ, “ಪ್ರಣವಾನಂದಶ್ರೀ ಯಾಕೆ ಕಣ್ಣೀರು ಹಾಕಿದ್ದಾರೆ, ತಪ್ಪು ಮಾಡಿದ್ದಾರಾ? ಪ್ರಣವಾನಂದಶ್ರೀ ಇಂತಹ ಬುರುಡೆಗಳನ್ನ ಬಿಟ್ಟುಕೊಂಡೇ ಬಂದಿದ್ದಾರೆ. ಪ್ರಣವಾನಂದಶ್ರೀ ನಮ್ಮ ಸಮಾಜದವರೇ ಅಲ್ಲ. ಅವರೇನು ಈಡಿಗ ಸಮಾಜದವರಾ? ಅವರ ಹಿನ್ನೆಲೆ ಕೆದಕಿ ನಿಮಗೆ ಗೊತ್ತಾಗುತ್ತದೆ. ನನ್ನ ವಿರುದ್ಧ ಬೆಂಗಳೂರು ನಗರ ಪೊಲೀಸ್ ಕಮಿಷನರ್, ಸ್ಪೀಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರಿಗೆ ಬೇಕಾದರೂ ದೂರು‌ ಕೊಡಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X