ಬೆಂಗಳೂರಿನ ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟಗೊಂಡು, ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.
“ಭಾನುವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ” ಎಂದು ಮಾರತ್ತಹಳ್ಳಿ ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿನಿಲಯಗಳಲ್ಲಿ ಮೂಲ ಸೌಕರ್ಯ ಕೊರತೆ; ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ
“ಚಾಮರಾಜನಗರದ ಕುಟುಂಬ, ಹಲವು ವರ್ಷಗಳಿಂದ ವಸಂತನಗರದಲ್ಲಿ ವಾಸವಿತ್ತು. ಇದೀಗ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.