ಏಷ್ಯಾ ಕಪ್ ಫೈನಲ್ | ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದ ಸಿರಾಜ್

Date:

Advertisements

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಫೈನಲ್ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ ಆರಂಭಿಕ ಆಘಾತ ನೀಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಲ್ಲದೇ, ಒಟ್ಟು 21 ರನ್‌ ನೀಡಿ 6 ವಿಕೆಟ್ ಗಳಿಸಿದ್ದರು. ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಬಳಿಕ ತನಗೆ ದೊರೆತ 5 ಸಾವಿರ ಡಾಲರ್ ಮೌಲ್ಯದ(ಅಂದಾಜು 4.15 ಲಕ್ಷ) ನಗದು ಮೊತ್ತವನ್ನು ಶ್ರೀಲಂಕಾದ ಮೈದಾನದ ಸಿಬ್ಬಂದಿಗೆ ಅರ್ಪಿಸಿದ್ದಾರೆ.

Advertisements

ಪ್ರಶಸ್ತಿ ಸ್ವೀಕರಿಸಿದ ಬಳಿಕ ತನ್ನ ಸಾಧನೆಯ ಬಗ್ಗೆ ಮಾತನಾಡಿದ ಮೊಹಮ್ಮದ್ ಸಿರಾಜ್, “ಇಂದಿನ ಫೈನಲ್ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಲಯ ಕಂಡುಕೊಂಡಿದ್ದೇನೆ. ನನಗೆ ಸಿಕ್ಕಿರುವ ಈ ನಗದು ಬಹುಮಾನವನ್ನು ಮೈದಾನದವರಿಗೆ ನೀಡಲು ಬಯಸುತ್ತೇನೆ. ಅವರು ಅದಕ್ಕೆ ಅರ್ಹರು. ಅವರು ಇಲ್ಲದೇ ಇರುತ್ತಿದ್ದರೆ, ಈ ಪಂದ್ಯಾಕೂಟ ಯಶಸ್ವಿಯಾಗುತ್ತಿರಲಿಲ್ಲ” ಎಂದು ತಿಳಿಸಿ, ಚೆಕ್‌ ಅನ್ನು ಸಿಬ್ಬಂದಿಗಳಿಗೆ ನೀಡಿದರು.

ಸಿರಾಜ್ ಅವರ ಈ ನಡೆಗೆ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು,’ಮಾದರಿ ನಡೆ” ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಪಂದ್ಯಾವಳಿಯುದ್ದಕ್ಕೂ ಮಳೆ ಕಾಟ ನೀಡಿದರೂ ಪಂದ್ಯಗಳು ಸುಗಮವಾಗಿ ಸಾಗಲು ಶ್ರಮಿಸಿದ ಶ್ರೀಲಂಕಾದ ಪೆಲ್ಲೆಕೆಲೆ ಮತ್ತು ಆರ್ ಪ್ರೇಮದಾಸ ಸ್ಟೇಡಿಯಂ ಮೈದಾನ ಸಿಬ್ಬಂದಿಗಳಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಕೂಡ 50 ಸಾವಿರ ಡಾಲರ್ ಮೊತ್ತದ ಬಹುಮಾನ ನೀಡಿ ಗೌರವಿಸಿದೆ. ರಾಷ್ಟ್ರೀಯ ಕ್ಯುರೇಟರ್ ಗಾಡ್ಫ್ರೇ ದಬ್ರೇರೆ ಏಷ್ಯನ್ ಕ್ರಿಕೆಟ್‌ ಕೌನ್ಸಿಲ್‌ನ ಅಧ್ಯಕ್ಷ ಜಯ್ ಶಾ ಅವರಿಂದ ಸ್ವೀಕರಿಸಿದರು.

ಟೂರ್ನಿಯಲ್ಲಿ ಒಂಭತ್ತು ವಿಕೆಟ್‌ಗಳನ್ನು ಗಳಿಸಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್‌ದೀಪ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಉತ್ತಮ ಕ್ಯಾಚ್‌ ಪಡೆದದ್ದಕ್ಕೆ ರವೀಂದ್ರ ಜಡೇಜಾ, ‘ಉತ್ತಮ ಕ್ಷೇತ್ರ ರಕ್ಷಕ ಪ್ರಶಸ್ತಿ’ಗೆ ಭಾಜನರಾದರು. ಚಾಂಪಿಯನ್ ಆದ ಟೀಮ್ ಇಂಡಿಯಾ ತಂಡಕ್ಕೆ 150(ಅಂದಾಜು 1.26 ಕೋಟಿ) ಡಾಲರ್ ನಗದು ಬಹುಮಾನ ದೊರೆಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X