ಬೀದರ್‌ | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

Date:

Advertisements
  • ಹೊಸ ಅಂಗನವಾಡಿ ನಿರ್ಮಾಣಕ್ಕೆ ಹಳೆ ಕಟ್ಟಡದ ಕಲ್ಲು, ಮಣ್ಣು ಬಳಕೆ
  • ಕಳಪೆ ಕಾಮಗಾರಿ ತಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅಂಗನವಾಡಿ ಕಟ್ಟಡ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಪರಿಶೀಲಿಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಗ್ರಾಮಸ್ಥರ ಆಗ್ರಹಿಸಿದರು.

ಈ ಕುರಿತು ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಎಂ. ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ ಗ್ರಾಮಸ್ಥರ ಅಂಗನಾಡಿ ಕಳಪೆ ಗಾಮಗಾರಿ ತಡೆಹಿಡಿದು ಕ್ರಮ ಜರುಗಿಸಲು ಒತ್ತಾಯಿಸಿದರು.

“ಗ್ರಾಮದ ಹಳೆ ಸರ್ಕಾರಿ ನೆಲ ಸಮಾನಗೊಳಿಸಿ ಅದೇ ಶಾಲೆಯ ಕಲ್ಲು, ಮಣ್ಣು ಹೊಸ ಅಂಗನವಾಡಿ ಕಟ್ಟಡ ಕಾಮಗಾರಿಗೆ ಬಳಸುತ್ತಿದ್ದಾರೆ. ಹೊಸ ಅಂಗನವಾಡಿ ನಿರ್ಮಿಸುವ ಜಾಗದಲ್ಲಿ ದೊಡ್ಡದಾದ ಕೆರೆ ಹಾಗೂ ಮೂರು ಕುಡಿಯುವ ನೀರಿನ ಟ್ಯಾಂಕ್‌ ಗಳಿವೆ. ಅವೈಜ್ಞಾನಿಕವಾಗಿ ಕೆರೆಯ ಪಕ್ಕದಲ್ಲಿ ನಿರ್ಮಿಸುತ್ತಿರುವ ಅಂಗನವಾಡಿ ಕಟ್ಟಡ ಬೇಗನೇ ಶಿಥಿಲಾವಸ್ಥೆಗೆ ತಲಪುತ್ತದೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಮೌಖಿಕವಾಗಿ ತಿಳಿಸಿದರೂ ಗುತ್ತಿಗೆದಾರರು ಕ್ಯಾರೇ ಎನ್ನದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ” ಎಂದು ಗ್ರಾಮಸ್ಥರು ದೂರಿದರು.

Advertisements

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿ ಕಳಪೆ ಕಾಮಗಾರಿ ತಡೆಹಿಡಿಯದಿದ್ದರೆ. ಮುಂಬರುವ ದಿನಗಳಲ್ಲಿ ಉಗ್ರವಾಗಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ; ಆಟ್ರಾಸಿಟಿ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ನಾಗೇಶ್ ಮೇತ್ರೆ, ರೋಹಿದಾಸ್ ಸಿಂಗೆ, ರವಿ ಮಾದಪ್ಪ ಗಂಗಾ, ಮಲ್ಲಮ್ಮ ಚಿಕನಂಗೆ, ರಾಜು ವಿಶ್ವನಾಥ್, ಸಿದ್ದಪ್ಪ ಚಿಕನಂಗೆ, ಬಸಪ್ಪ ಧರ್ಮಜೆ, ಪ್ರಕಾಶ್ ಮಸಗಲೆ, ವಿಶ್ವನಾಥ್ ಹಂಗರ್ಗೆ, ಶಂಕ್ರಪ್ಪ ಧರ್ಮಜೆ, ಗಣಪತಿ ದೇಶಮುಖ, ಉಮೇಶ್ ನೆಳಗೆ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X