ವಂಚನೆ ಪ್ರಕರಣ | ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ‘ಡಿಸ್ಚಾರ್ಜ್‌’; ನೇರವಾಗಿ ಸಿಸಿಬಿ ಕಚೇರಿಗೆ

Date:

Advertisements
  • ‘ನೊರೆಯನ್ನು ಚೈತ್ರಾ ಕುಂದಾಪುರಳೇ ಸೃಷ್ಟಿಸಿದ್ದು’ ಎಂದು ತಿಳಿಸಿದ ಡಾ.ದಿವ್ಯಪ್ರಕಾಶ್
  • ಸೆ.15ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದ ವಂಚನೆ ಆರೋಪಿ ಚೈತ್ರಾ ಕುಂದಾಪುರ

ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಬಳಿಕ ಇಂದು(ಸೆ.18) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಬಿಡುಗಡೆಯಾದ ಕೂಡಲೇ ವಿಚಾರಣೆಗಾಗಿ ಆಕೆಯನ್ನು ಸಿಸಿಬಿ ಪೊಲೀಸರು ಕಚೇರಿಗೆ ಕರೆದೊಯ್ದಿದ್ದಾರೆ.

ಎಲ್ಲ ಪರೀಕ್ಷೆಗಳನ್ನು ನಡೆಸಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ತಂಡ, ಚೈತ್ರಾಳ ಆರೋಗ್ಯ ಚೆನ್ನಾಗಿದೆ ಎಂಬುದನ್ನು ದೃಢಪಡಿಸಿದ ಬಳಿಕ ಆಸ್ಪತ್ರೆಯಿಂದ ‘ಡಿಸ್ಚಾರ್ಜ್‌’ ಮಾಡಲಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಸಿಸಿಬಿ ಪೊಲೀಸರು ನೇರವಾಗಿ ವಿಚಾರಣೆಗಾಗಿ ಆಕೆಯನ್ನು ಕಚೇರಿಗೆ ಕರೆದೊಯ್ದಿದ್ದಾರೆ.

Advertisements

ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ಕೂಡಲೇ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಿಂದ ಬಿಡುಗಡೆಯ ಬಳಿಕ ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ಡಾ.ದಿವ್ಯಪ್ರಕಾಶ್, “ಚೈತ್ರಾಳ ಆರೋಗ್ಯದ ಬಗ್ಗೆ ಎಲ್ಲ ತಪಾಸಣೆ ನಡೆಸಿದಾಗ, ನಾರ್ಮಲ್ ಇದೆ. ಇಸಿಜಿ ಕೂಡ ನಾರ್ಮಲ್ ಇದೆ. ಮನೋ ವೈದ್ಯರು ಕೂಡ ತಪಾಸಣೆ ಮಾಡಿದ್ದಾರೆ. ಎಲ್ಲೂ ಸಮಸ್ಯೆ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, “ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನು ಮಾಡಿಕೊಂಡಿದ್ದಾರೆ.ಫಿಟ್ಸ್ ರೋಗವಿರುವ ಬಗ್ಗೆ ಯಾವುದೇ ಲಕ್ಷಣ ಕಂಡು ಬಂದಿಲ್ಲ” ಎಂದು ತಿಳಿಸಿದ್ದಾರೆ.

“ಫಿಟ್ಸ್ ಪತ್ತೆ ಮಾಡುವುದಕ್ಕೂ ಎಂಆರ್‌ಐ ಸ್ಕ್ಯಾನಿಂಗ್, ಇಸಿಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ. ಎಲ್ಲವೂ ನಾರ್ಮಲ್ ಇದೆ. ಸದ್ಯಕ್ಕೆ ಫಿಟ್ಸ್ ಕಂಡು ಬಂದಿಲ್ಲ. ನರರೋಗ ತಜ್ಞರು ಕೆಲವು ಮಾತ್ರೆಗಳನ್ನಷ್ಟೇ ಕೊಟ್ಟಿದ್ದಾರೆ” ಎಂದು ಡಾ.ದಿವ್ಯಪ್ರಕಾಶ್ ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X