ಬೆಂಗಳೂರು | ಪುನೀತ್ ಕೆರೆಹಳ್ಳಿ ಬಿಡುಗಡೆ, ಸರ್ಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

Date:

Advertisements

ಪುನೀತ್ ಕೆರೆಹಳ್ಳಿ ಬಿಡುಗಡೆ ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ. ಇದು ಖಂಡನೀಯ,” ಎಂದು ಆರೋಪಿಸಿದ್ದಾರೆ.

“ಹಲವು ಸಮಾಜ ಘಾತುಕ ಕೃತ್ಯ, ಕೊಲೆ, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸರಕಾರಕ್ಕೆ, ಅಲ್ಪಸಂಖ್ಯಾತರಿಗೆ ಬಹಿರಂಗ ಸವಾಲು ಹಾಕಿದ ಒಬ್ಬ ಆರೋಪಿಯ ರಕ್ಷಣೆಗೆ ಸರಕಾರವೇ ಇಳಿದಿರುವುದು ಅಕ್ಷಮ್ಯ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಕೆಲವು ಪ್ರಕರಣಗಳಿವೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಇದ್ರೀಸ್ ಪಾಷಾ ಹತ್ಯೆಯ ಆರೋಪವೂ ಪುನೀತ್‌ ಕೆರೆಹಳ್ಳಿ ಮೇಲಿದೆ. ಇಷ್ಟಿದ್ದರೂ ಈತನ ಬಿಡುಗಡೆಗೆ ಸರಕಾರದ ಸಲಹಾ ಮಂಡಳಿ ಸಹಕರಿಸಿದೆ. ಇದು ಅನ್ಯಾಯದ ನಡೆ,” ಎಂದು ಅವರು ಹೇಳಿದ್ದಾರೆ.

Advertisements

ಕಾಂಗ್ರೆಸ್ ಪಕ್ಷ, ತನ್ನ ಪ್ರಣಾಳಿಕೆಯಲ್ಲಿ ಮತ್ತು ತನ್ನ ಸರಕಾರ ರಚನೆಯ ನಂತರ ದಿನವೂ, ಅಲ್ಪ ಸಂಖ್ಯಾತರ ರಕ್ಷಣೆ, ಕೋಮುವಾದಿಗಳಿಗೆ, ಸಮಾಜದಲ್ಲಿ ದ್ವೇಷ ಹರಡುವಂತಹವರಿಗೆ ಕಠಿಣ ಶಿಕ್ಷೆ ವಿಧಿಸುವ ಭಾಷಣಗಳನ್ನು ಮತ್ತು ಪತ್ರಿಕಾ ಹೇಳಿಕೆಗಳನ್ನ ನೀಡುತ್ತಲೇ ಇವೆ. ಆದರೆ, ಸರಕಾರದ ಈ ನಡೆ, ಅವರ ಮಾತಿಗೆ ತದ್ವಿರುದ್ದವಾಗಿದೆ. ಸರಕಾರದ ಭಾಷಣ, ಪತ್ರಿಕಾ ಹೇಳಿಕೆಗಳು ಕೇವಲ ಕಾಗದಗಳಿಗೆ ಸೀಮಿತವಾಗದೆ ಅನುಷ್ಟಾನಕ್ಕೆ ಬರಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X