ಬರ ಪೀಡಿತ ಪ್ರದೇಶ ಪಟ್ಟಿಯಲ್ಲಿಲ್ಲ ಬೆಳಗಾವಿ – ಖಾನಾಪುರ; ರೈತರ ಅಸಮಾಧಾನ

Date:

Advertisements

ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಬರ ಘೋಷಣೆಯಾದ ನಂತರ ಬೆಳೆ ಸಮೀಕ್ಷೆಯಲ್ಲಿ ತಾರತಮ್ಯವಾಗಿದೆ. ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಮಳೆಯಾಶ್ರಿತ ಬೆಳೆಗಳ ಬಿತ್ತನೆ ಕಾರ್ಯ ವಿಳಂಬವಾಗಿದೆ. ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಇಳುವರಿಯೂ ಕಡಿಮೆಯಾಲಿದೆ. ಆದರೂ, ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸದೇ ಇರುವುದು ರೈತ ವಿರೋಧಿ ನಡೆಯಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಭತ್ತ ಬೆಳೆಯುವ ಪ್ರದೇಶಗಳಿಗೆ ನಿರಂತರ ಮಳೆಯ ಅಗತ್ಯವಿದೆ. ಭತ್ತದ ಬೆಳೆ ನಾಟಿ ಹಂತದಿಂದ ಕೊಯ್ಲು ಮಾಡುವವರೆಗೂ ನೀರು ಬೇಕು. ಆದರೆ, ಈ ವರ್ಷ ಸಮರ್ಪಕವಾಗಿ ಮಳೆಯಾಗಿಲ್ಲ. ಅಗತ್ಯವಿರುವ ನೀರಿನ ಪ್ರಮಾಣ ಮತ್ತು ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಬೆಳಗಾವಿ ತಾಲೂಕಿನ ರೈತರು ಆರೋಪಿಸಿದ್ದಾರೆ.

Advertisements

ಬೆಳಗಾವಿ ಮತ್ತು ಖಾನಾಪುರ ತಾಲೂಕಿನಲ್ಲಿ ಮಳೆ ಕೊರತೆಯಿಂದ ಭತ್ತದ ಬೆಳೆ ನೆಲಕಚ್ಚಿದೆ. ಆದರೆ, ಸರ್ಕಾರ ಈ ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿಲ್ಲ. ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತೇವೆ” ಎಂದು ಕಂಗ್ರಾಳಿಯ ರೈತ ಶಿವಾಜಿ ಹೇಳಿದ್ದಾರೆ.

“ಜಿಲ್ಲೆಯ 13 ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಆಯಾ ತಾಲೂಕುಗಳಲ್ಲಿ ಎರಡು ಪ್ರಮುಖ ಬೆಳೆಗಳ ಸ್ಥಿತಿಗತಿ ಕುರಿತು ಐದು ವಿವಿಧ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದೇವೆ. ಬಹುತೇಕ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಸವದತ್ತಿ, ಬೈಲಹೊಂಗಲ, ಕಿತ್ತೂರು, ರಾಮದುರ್ಗ, ಅಥಣಿ, ಮೂಡಲಗಿ, ಗೋಕಾಕ, ಯರಗಟ್ಟಿ, ಚಿಕ್ಕೋಡಿ, ಕಾಗವಾಡ, ನಿಪ್ಪಾಣಿ, ರಾಯಬಾಗ ತಾಲೂಕುಗಳಲ್ಲಿ ಸೋಯಾಬಿನ್, ಕಾಳು ಸೇರಿದಂತೆ ಪ್ರಮುಖ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ. ಅಂತರ್ಜಲ ಮಟ್ಟ ಮತ್ತು ತೇವಾಂಶದ ಕೊರತೆಯನ್ನು ಸಹ ಪರಿಗಣಿಸಲಾಗಿದೆ” ಎಂದು ಕೃಷಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X