ಬೆಂಗಳೂರು | ಅಲ್ಪಾವಧಿ ಸಾಲ ನೀಡುವ ಜಾಲದ ಕುರಿತು ಎಚ್ಚರವಿರಲಿ ಎಂದ ಪೊಲೀಸರು

Date:

Advertisements

ಸಾಲವನ್ನು ಪಡೆಯುವುದು ಈಗ ಸರಳ ಹಾಗೂ ಸುಲಭವಾಗಿದೆ. ಆ್ಯಪ್‌ಗಳ ಮುಖಾಂತರ ಕ್ಷಣ ಮಾತ್ರದಲ್ಲಿ ಲೋನ್ ಪಡೆಯುವಂತಹ ವ್ಯವಸ್ಥೆ ಇದೀಗ ಜಾರಿಯಲ್ಲಿದೆ. ಆದರೆ, ಇದರಿಂದ ಅನುಕೂಲ ಇರುವುದಕ್ಕಿಂತ ಜನರಿಗೆ ಅನಾನುಕೂಲವೇ ಹೆಚ್ಚಾಗಿದೆ.

ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ನಲ್ಲಿ ಚೈನಿ ಸೇರಿದಂತೆ ಹಲವಾರು ಅಕ್ರಮ ಸಾಲದ ಅಪ್ಲಿಕೇಶನ್‌ಗಳು ಲಭ್ಯವಿವೆ. ಅವಶ್ಯಕತೆಗೆ ಹಲವು ಜನ ಈ ಆ್ಯಪ್‌ಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಹಣ ಪಡೆಯುತ್ತಾರೆ. ಬಳಿಕ ಈ ಆ್ಯಪ್‌ ಕಂಪನಿಗಳು ಜನರಿಗೆ ಹೆಚ್ಚಿನ ಬಡ್ಡಿ ದರ ವಿಧಿಸಿ, ಕಟ್ಟದೆ ಇದ್ದಾಗ ಹಿಂಸೆ ನೀಡಲು ಪ್ರಾರಂಭ ಮಾಡುತ್ತವೆ. ಜತೆಗೆ ನಿಮ್ಮ ಫೋಟೋ ಎಲ್ಲ ದಾಖಲೆಗಳನ್ನು ಸಂಗ್ರಹಿಸಿಕೊಂಡು ಬ್ಲ್ಯಾಕ್‌ ಮೇಲ್ ಮಾಡಲು ಮುಂದಾಗುತ್ತವೆ. ಹಾಗಾಗಿ, ಇಂತಹ ಆ್ಯಪ್‌ಗಳಿಂದ ಸಾಲ ಪಡೆಯುವ ಮುನ್ನ ಎಚ್ಚರವಾಗಿರಿ ಎಂದು ಬೆಂಗಳೂರು ನಗರ ಪೊಲೀಸ್ ತಿಳಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿದ ಬೆಂಗಳೂರು ನಗರ ಪೊಲೀಸ್‌, “ಹಲವಾರು ಅಪ್ಲಿಕೇಶನ್‌ಗಳ ಮೂಲಕ ಅಲ್ಪಾವಧಿಯ ಸಾಲಗಳನ್ನು ನೀಡಿ ನಂತರದಲ್ಲಿ ಸಾಲ ಪಡೆದವರಿಗೆ ಬೆದರಿಕೆ ಹಾಕಿ ವಿಪರೀತ ಬಡ್ಡಿ ದರ ವಿಧಿಸಿ ಸುಲಿಗೆ ಮಾಡುವ ವಂಚಕರ ಜಾಲದ ಕುರಿತಾಗಿ ಎಚ್ಚರವಿರಲಿ” ಎಂದು ತಿಳಿಸಿದೆ.

Advertisements

“ಇಂತಹ ಅನಧಿಕೃತ ಸಾಲದ ಆ್ಯಪ್‌ಗಳಿಂದ ಸುರಕ್ಷಿತವಾಗಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯವಾಗಿದೆ. ಬೆಂಗಳೂರು ನಗರ ಪೊಲೀಸರು ಈ ಸಮಸ್ಯೆಗಳನ್ನು ಹತ್ತಿಕ್ಕಲು ಕ್ರಿಯಾಶೀಲವಾಗಿ ಕಾರ್ಯಪ್ರವೃತ್ತರಾಗಿದ್ದಾರೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಓಡಿಶಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ

“ಸಾರ್ವಜನಿಕರು ಈ ಕುರಿತಾಗಿ ಜಾಗರೂಕರಾಗಿರುವುದರ ಜತೆಗೆ ಇಂತಹ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಗಮನಕ್ಕೆ ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ವರದಿ ಮಾಡಬೇಕು” ಎಂದು ಮನವಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X