ಚಾಮರಾಜನಗರ | ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ಸಿಇಎನ್‌ಗೆ ದೂರು

Date:

Advertisements

ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

“10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಆರೋಪಿಯು, ತನ್ನ ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ” ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಈ ಸಂಬಂಧ ಸಂತ್ರಸ್ತ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Advertisements

ಅಬ್ದುಲ್ ಅಸೀಮ್ ಮತ್ತು ಆತನ ಸಹಚರ ಮಯೂರ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಘಟನೆ ಹಿನ್ನೆಲೆ

ಅದ್ಬುಲ್ ಅಸೀಮ್ ಮತ್ತು ಸಂತ್ರಸ್ತೆ ಏಳು ವರ್ಷಗಳಿಂದ ಪರಿಚಿತರಾಗಿದ್ದರು. ಎರಡು ವರ್ಷಗಳ ಹಿಂದೆ ಮಹಿಳೆ ಬೇರೊಬ್ಬರನ್ನು ಮದುವೆಯಾಗಿದ್ದರು. ಹೀಗಾಗಿ, ಪತಿಯನ್ನು ಬಿಟ್ಟು ತನ್ನೊಂದಿಗೆ ಬರುವಂತೆ ಆರೋಪಿ ಸಂತ್ರಸ್ತೆ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.

ಪತಿಯನ್ನು ಬಿಟ್ಟು ಬಾರದಿದ್ದರೆ ಆಕೆಯ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಅಬ್ದುಲ್ ಅಸೀಮ್ ತನ್ನ ಸಹಚರ ಮಯೂರ್ ಜೊತೆಗೆ ಆಕೆಯ ಖಾಸಗಿ ವಿಡಿಯೋಗಳನ್ನು ಮಹಿಳೆಯ ಪತಿ ಮತ್ತು ಕುಟುಂಬ ಸದಸ್ಯರಿಗೆ ಕಳುಹಿಸಿದ್ದ.

ಈ ಸುದ್ದಿ ಓದಿದ್ದೀರಾ? ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

ಗಂಡನನ್ನು ಬಿಟ್ಟು ಬಾರದಿದ್ದರೆ ಹಿಂದೂ-ಮುಸ್ಲಿಂ ಸಂಘರ್ಷಕ್ಕೂ ನಾಂದಿ ಹಾಡುವುದಾಗಿ ಬೆದರಿಕೆ ಹಾಕಿದ್ದ. ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಬಾರದು ಎಂದಾದರೆ 10 ಲಕ್ಷ ರೂ. ನೀಡಬೇಕೆಂದು ಬೇಡಿಕೆ ಇಟ್ಟಿದ್ದನು. ಹಣ ನೀಡದಿದ್ದಲ್ಲಿ ಆಕೆಯ ಖಾಸಗಿ ವಿಡಿಯೋದ ದೃಶ್ಯಗಳ ಬ್ಯಾನರ್‌ಗಳನ್ನು ಆ ಪ್ರದೇಶದಲ್ಲಿ ಹಾಕುವುದಾಗಿ ಆರೋಪಿ ಬೆದರಿಕೆಯೊಡ್ಡಿದ್ದ.

ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಎಸ್ಸಿಪಿ, ಟಿಎಸ್ಪಿ ಯೋಜನೆ ಫಲಾನುಭವಿಗಳ ಆಯ್ಕೆ ಪಾರದರ್ಶಕತೆಗೆ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ...

ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ...

ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ...

ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ...

Download Eedina App Android / iOS

X