ಡೇಟಿಂಗ್ ಹಗರಣ | ₹1.05 ಕೋಟಿ ಕಳೆದುಕೊಂಡ ವ್ಯಕ್ತಿ

Date:

Advertisements

ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಕೂಡ ಹಗರಣವಾಗಿ ಮಾರ್ಪಟ್ಟಿದೆ. ಡೇಟಿಂಗ್ ಹೆಸರಿನಲ್ಲಿ ವಂಚಿಸಲ್ಪಡುವ ಮತ್ತು ವಂಚನೆಗೆ ಒಳಗಾಗುವ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಅಂತಹದ್ದೇ ಪ್ರಕರಣವೊಂದರಲ್ಲಿ, ಬೆಂಗಳೂರಿನ ವಿಚ್ಛೇದಿತ ವ್ಯಕ್ತಿಯೊಬ್ಬರು ₹1.05 ಕೋಟಿ ಕಳೆದುಕೊಂಡಿದ್ದಾರೆ.

ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಓರ್ವ ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಆಕೆ, ತಾನೂ ವಿಚ್ಛೇದಿತೆ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾಳೆ. ವ್ಯಾಪಾರದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ಬರೋಬ್ಬರಿ ಕೋಟಿ ರೂಪಾಯಿ ವಂಚಿಸಿದ್ದಾಳೆ ಎಂದು ತಿಳಿದುಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಕೃತಿ ಶ್ರೀಧರನ್ ಎಂಬ ಹೆಸರಿನಿಂದ ಗುರುತಿಸಿಕೊಂಡಿರುವ ಮಹಿಳೆ ಮೂಲತಃ ಕೇರಳದವರು ಎಂದು ಹೇಳಲಾಗಿದೆ. ಆಕೆ, ವಂಚನೆಗೊಳಗಾದ ವ್ಯಕ್ತಿಯೊಂದಿಗೆ ಸುಮಾರು ಮೂರ್ನಾಲ್ಕು ತಿಂಗಳು ಚಾಟಿಂಗ್ ನಡೆಸಿದ್ದಾಳೆ.

Advertisements

ಆತನ ವಿಶ್ವಾಸ ಗಳಿಸಿದ ಬಳಿಕ, “ಆನ್‌ಲೈನ್ ವಿದೇಶಿ ವಿನಿಮಯ ವ್ಯಾಪಾರದಲ್ಲಿ ಹೂಡಿಕೆ ಮಾಡುತ್ತಿದ್ದೇನೆ. ಇದರಿಂದ ಉತ್ತಮ ಆದಾಯ ಬರುತ್ತಿದೆ. ನಾನು ₹12 ಕೋಟಿ ಗಳಿಸಿದ್ದೇನೆ. ನೀವು ಹೆಚ್ಚು ಆದಾಯ ಗಳಿಸಬಹುದು” ಎಂದು ಆಮಿಷವೊಡ್ಡಿದ್ದಾಳೆ.

ಆಕೆಯ ಮಾತನ್ನು ನಂಬಿದ ಸಂತ್ರಸ್ತ ಕಾಲಕ್ರಮೇಣ ಒಟ್ಟು ₹1.05 ಕೋಟಿ ವ್ಯಯಿಸಿದ್ದಾನೆ. ಬಳಿಕ, ತನ್ನ ಹೂಡಿಕೆ ಹಣವನ್ನು ವಾಪಸ್ ಪಡೆಯಲು ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾನೆ. ಆದರೆ, ಆತನ ವೈಯಕ್ತಿಕ ಮಾಹಿತಿ ಹಾಗೂ ಬ್ಯಾಂಕ್ ಮಾಹಿತಿಗಳನ್ನೆಲ್ಲ ಪಡೆದುಕೊಂಡಿದ್ದ ಮಹಿಳೆ ಆತನಿಗೆ ಬೆದರಿಕೆ ಹಾಕಿದ್ದಾಳೆ. ಅಲ್ಲದೆ, ಆತನ ಬ್ಯಾಂಕ್ ಖಾತೆಯಿಂದ ಲಾಗ್ ಔಟ್ ಮಾಡಿದ್ದಾಳೆ ಎಂದು ಬೆಂಗಳೂರು ಆಗ್ನೇಯ ಪೊಲೀಸ್ ಉಪ ಆಯುಕ್ತ ಸಿ.ಕೆ ಬಾಬಾ ಹೇಳಿದ್ದಾರೆ.

ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಸೈಬರ್ ಕ್ರೈಮ್ ಪೊಲೀಸರು ಆತನ ಬ್ಯಾಂಕ್ ಖಾತೆಯನ್ನು ನಿರ್ಬಂಧಿಸಿದ್ದಾರೆ. ಆತ ಕಳೆದುಕೊಂಡ ಮೊತ್ತವನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

ಡೇಟಿಂಗ್/ಮ್ಯಾಟ್ರಿಮೋನಿಯಲ್ ಪ್ಲಾಟ್ಫಾರ್ಮ್‌ಗಳನ್ನು ಬಳಸುವವರಿಗೆ ಪೊಲೀಸ್ ಸಲಹೆ

  • ವೈಯಕ್ತಿಕ ಮತ್ತು ಹಣಕಾಸಿನ ಮಾಹಿತಿ, ವಿಳಾಸ ಅಥವಾ ದಾಖಲೆಗಳನ್ನು ಹಂಚಿಕೊಳ್ಳಬೇಡಿ
  • ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ಬಾರಿ ಭೇಟಿ ಮಾಡಿ ಮತ್ತು ಆ ಖಾತೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ
  • ವರ್ಚುವಲ್ ಪ್ಲಾಟ್ಫಾರ್ಮ್‌ಗಳ ಮೂಲಕ ನಿಕಟ ಚಾಟ್‌ಗಳು/ಕರೆಗಳನ್ನು ಮಾಡಬೇಡಿ
  • ಆತುರದ ಹೂಡಿಕೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
  • ವಂಚನೆಯ ಅನುಮಾನವಿದ್ದರೆ 1930 ಅಥವಾ 112 ಅನ್ನು ಸಂಪರ್ಕಿಸಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X