ಬೆಂಗಳೂರು | ಬನ್ನೇರುಘಟ್ಟ ಉದ್ಯಾನದಲ್ಲಿ 13 ಜಿಂಕೆಗಳು ನಿಗೂಢ ಸಾವು

Date:

Advertisements

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ 10 ದಿನಗಳಿಂದ 13 ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಜಿಂಕೆಗಳ ಪರಸ್ಪರ ಕಾದಾಟ ಮತ್ತು ಜಂತುಹುಳುಗಳ ಬಾಧೆಯಿಂದ ಕೆಲವು ಜಿಂಕೆಗಳು ಮೃತಪಟ್ಟಿವೆ. ಆದರೂ, ಇನ್ನೂ ಕೆಲವು ಜಿಂಕೆಗಳ ಸಾವಿಎ ಕಾರಣವೇನು ಎಂಬುದು ತಿಳಿದುಬಂದಿದೆ. ಮೃತಪಟ್ಟ ಕೆಲವು ಜಿಂಕೆಗಳ ಹೊಟ್ಟೆಯ ಭಾಗದಲ್ಲಿ ಊತ ಕಾಣಿಸಿಕೊಂಡಿತ್ತು ಎಂದು ಉದ್ಯಾನವನದ ಮೂಲಗಳು ತಿಳಿಸಿವೆ.

ಬೆಂಗಳೂರಿನ ಸೇಂಟ್‌ ಜಾನ್ಸ್ ಆಸ್ಪತ್ರೆಯ ಉದ್ಯಾನದಲ್ಲಿದ್ದ 37 ಜಿಂಕೆಗಳನ್ನು ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಬನ್ನೇರುಘಟ್ಟ ಉದ್ಯಾನವನಕ್ಕೆ ಆಗಸ್ಟ್‌ 17ರಂದು ಹಸ್ತಾಂತರಿಸಲಾಗಿತ್ತು. ಆ ಜಿಂಕೆಗಳನ್ನು 10 ದಿನ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆ ಸಮಯದಲ್ಲೇ 9 ಜಿಂಕೆಗಳು ಸಾವನ್ನಪ್ಪಿದ್ದವು. ಸೋಮವಾರ ನಾಲ್ಕು ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

Advertisements

“ಜಿಂಕೆಗಳು ಅತ್ಯಂತ ಸೂಕ್ಷ್ಮ ಪ್ರಾಣಿಗಳು. ಅವುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಿದಾಗ, ಹೊಸ ಜಾಗಕ್ಕೆ ಹೊಂದಿಕೊಳ್ಳುವುದು ಕಷ್ಟ” ಎಂದು ಉದ್ಯಾನವನ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿರುವುದಾಗಿ ‘ಪಿವಿ’ ವರದಿ ಮಾಡಿದೆ.

“ಕ್ವಾರಂಟೈನ್‌ ಜಾಗದಲ್ಲಿ ಗಂಡು ಜಿಂಕೆಗಳೇ ಹೆಚ್ಚಾಗಿದ್ದವು. ಇದು ಜಿಂಕೆಗಳ ಮಿಲನದ ಸಮಯವಾದ್ದರಿಂದ ಹೆಣ್ಣು ಜಿಂಕೆಗಾಗಿ ಪರಸ್ಪರ ಕಾದಾಟದಿಂದಾಗಿ ಹೆಚ್ಚಿನ ಗಂಡು ಜಿಂಕೆಗಳು ಮೃತಪಟ್ಟಿವೆ.ಕೆಲವು ಜಿಂಕೆಗಳು ಜಂತುಹುಳು ಬಾಧೆಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಉದ್ಯಾನವನದಲ್ಲಿದ್ದ ಏಳು ಚಿರತೆ ಮರಿಗಳು ರಕ್ತಭೇದಿಯಿಂದ ಸಾವನ್ನಪ್ಪಿದ್ದವು. ಇದೀಗ, ಜಿಂಕೆಗಳ ಸರಣಿ ಸಾವು ಎದುರಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X