ಬೆಂಗಳೂರು | ಸೆ.21 ರಂದು ಮೆಟ್ರೋ ಸೇವೆಯಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ

Date:

Advertisements

ಕೃಷ್ಣರಾಜಪುರದಿಂದ ಗರುಡಾಚಾರ್‌ಪಾಳ್ಯ ನಡುವೆ ಸೆ.21 ರಂದು ಇಡೀ ದಿನ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ಸೆ.21 ರಂದು ಕೃಷ್ಣರಾಜಪುರದಿಂದ ಗರುಡಾಚಾರ್‌ಪಾಳ್ಯ ನಡುವೆ ಪೂರ್ಣ ದಿನ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ದಿನ ಬೈಯಪ್ಪನಹಳ್ಳಿ ಮತ್ತು ಇಂದಿರಾನಗರ ನಡುವೆ ಮಧ್ಯಾಹ್ನ 1.30 ಗಂಟೆಯಿಂದ 4.30 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ” ಎಂದು ಹೇಳಿದೆ.

“ಸೆ.21 ರಂದು ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸಲಿದ್ದಾರೆ. ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ” ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ; ತಂಬಾಕು ಉತ್ಪನ್ನ ಖರೀದಿ ವಯೋಮಿತಿ 21 ವರ್ಷಕ್ಕೆ ಏರಿಕೆ: ದಿನೇಶ್ ಗುಂಡೂರಾವ್

“ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಗರುಡಾಚಾರ್ ಪಾಳ್ಯ ನಡುವೆ ಪೂರ್ಣ ದಿನ ಹಾಗೂ ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30 ಗಂಟೆಯಿಂದ 4.30 ಗಂಟೆಯವರೆಗೆ ಮೆಟ್ರೋ ರೈಲು ಸೇವೆ ಲಭ್ಯವಿರಲಿದೆ. ಮಧ್ಯಾಹ್ನ 1.30 ವರೆಗೆ ಮತ್ತು ಸಂಜೆ 4.30 ಗಂಟೆಯ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳು ಎಂದಿನಂತೆ ರಾತ್ರಿ 11 ರವರೆಗೆ ಲಭ್ಯವಿರಲಿವೆ” ಎಂದು ಹೇಳಿದೆ.

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಆದ ಬದಲಾವಣೆಯನ್ನು ಗಮನಿಸಬೇಕು. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಿಗಮ ವಿಷಾದಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X