ನೀರು ಖಾಲಿಯಾದ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಾ?: ಕುಮಾರಸ್ವಾಮಿ ವಾಗ್ದಾಳಿ

Date:

Advertisements
  • ಕಾವೇರಿ ಸಂಕಷ್ಟ ಸೂತ್ರ ರೂಪಿಸಬೇಕಾದವರು ಯಾರು?: ಎಚ್‌ಡಿಕೆ
  • ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದ?

ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ, ಈ ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಏನು ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆ ಕೊಡುತ್ತಿದ್ದರೆ ಉಪಯೋಗ ಏನು? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ಮೊದಲನೇಯ ತಪ್ಪು. ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು” ಎಂದರು.

ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದು ಇವತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಏನು ಚರ್ಚೆ ಮಾಡಿದ್ದಾರೆ? ಇವರೇನು ಹೇಳಿದ್ದಾರೆ ಎನ್ನುವ ಮಾಹಿತಿ ನನಗೂ ಇದೆ. ಹೊರನೋಟಕ್ಕೆ ನಾವು ಒಗ್ಗಟ್ಟಾಗಿದ್ದೇವೆ ಎಂದು ತೋರಿಸುವುದರಲ್ಲಿ ಏನೂ ಪ್ರಯೋಜನವಿಲ್ಲ. ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದಾ?” ಎಂದು ವಾಗ್ದಾಳಿ ನಡೆಸಿದರು.

Advertisements

“ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ನಿಯಂತ್ರಣ ಸಮಿತಿ ಏನಾದ್ರೂ ದೇವಲೋಕದಿಂದ ಇಳಿದು ಬಂದಿದೆಯಾ? ಅಲ್ಲಿರುವವರೆಲ್ಲ ನಾವು ನೇಮಕ ಮಾಡಿಕೊಂಡ ಸದಸ್ಯರೆಲ್ಲವೇ? ಈಗ ನೋಡಿದರೆ ನಮ್ಮ ರಾಜ್ಯದ ಜನರ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ’ಈ ದಿನ’ ಸಂಪಾದಕೀಯ| 2029ರ ಕನಸಿಗೆ ಈಗಲೇ ‘ಟೋಪಿ’ ಹೊಲಿದ ಮೋದಿ ಮಂತ್ರವಾದಿ

“ನಮ್ಮ ಅಧಿಕಾರಿಗಳ ಕೆಲಸ ಅಂದರೆ ಆ ದೇವರಿಗೆ ಪ್ರೀತಿ. ದೆಹಲಿಯಲ್ಲಿ ನಡೆಯುವ ಸಭೆಗಳಿಗೆ ಮಾಹಿತಿ, ಅಂಕಿ ಅಂಶಗಳ ಸಮೇತ ಹೋಗಿ ಕೂತು ಚರ್ಚೆ ಮಾಡುವುದು ಬಿಟ್ಟು ಇಲ್ಲಿಂದಲೇ ವರ್ಚುವಲ್ ಆಗಿ ಹಾಜರಾಗುತ್ತಾರೆ. ತಮಿಳುನಾಡಿನಿಂದ ಹದಿನೈದು ಜನ ಅಧಿಕಾರಿಗಳು ಹೋಗುತ್ತಾರೆ. ಇದರಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತದಾ” ಎಂದು ಪ್ರಶ್ನಿಸಿದರು.

“ನೀರಾವರಿ ಬಗ್ಗೆ ಸಚಿವರಿಗೆ ತಿಳಿವಳಿಕೆ ಇಲ್ಲದಿದ್ದರೆ ಕೊನೆಪಕ್ಷ ಈ ಬಗ್ಗೆ ಗೊತ್ತಿರುವವರ ಸಲಹೆಯನ್ನಾದರೂ ಪಡೆದು ಹೆಜ್ಜೆ ಇಡಲಿ. ರಾಜ್ಯದಲ್ಲಿ ಬರ ಇದೆ, 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ ಎಂದು ಸ್ವತಃ ಕಂದಾಯ ಸಚಿವರೇ ಹೇಳಿದ್ದಾರೆ. ಆದರೆ ಇಷ್ಟು ದಿನ ಸರ್ಕಾರ ಮಾಡಿದ್ದೇನು?” ಎಂದು ತರಾಟೆಗೆ ತೆಗೆದುಕೊಂಡರು.

“ಭಾಷಣ ಮಾಡಲಿಕ್ಕೆ ರಾತ್ರೋರಾತ್ರಿ ತರಾತುರಿಯಲ್ಲಿ ಇವರೆಲ್ಲ ದೆಹಲಿಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಹಾಕಿ, ರಾಜ್ಯ ವಾಸ್ತವ ಪರಿಸ್ಥಿತಿಯನ್ನು ವಿವರಿಸುವುದು ಬಿಟ್ಟು, ಆ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವುದು ಬಿಟ್ಟು, ಅರ್ಜಿ ಸಲ್ಲಿಸುವುದಕ್ಕೆ ಆಲೋಚನೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ನೀರು ಖಾಲಿಯಾದ ಮೇಲೆ ಇವರು ಕ್ರಮ ಕೈಗೊಳ್ಳುತ್ತಾರಾ ನೋಡಬೇಕು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X