ರಾಯಚೂರು | ಜಿಲ್ಲೆಯ ವಿವಿಧ ಗ್ರಾ.ಪಂ.ಗಳ ‘ಪಿಡಿಒ’ಗಳ ವರ್ಗಾವಣೆ

Date:

Advertisements

ರಾಯಚೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಡಿಒಗಳನ್ನು ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಡಳಿತ ವಿಭಾಗದ ನಿರ್ದೇಶಕರು ಆದೇಶ ಹೊರಡಿದ್ದಾರೆ.

ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮ ಪಂಚಾಯತಿ ಪಿಡಿಒ ತಾರಕೇಶ್ವರಿ ಅವರನ್ನು ರಾಯಚೂರು ತಾಲೂಕಿನ ಕಮಲಾಪೂರ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗ್ನಿ ಗ್ರಾಮ ಪಂಚಾಯತಿಯ ಪಿಡಿಒ ಹನುಮಂತಪ್ಪ ಟಿ ಅವರನ್ನು ರಾಯಚೂರು ತಾಲೂಕಿನ ಪೂರ್ತಿಪ್ಲಿ ಗ್ರಾಮ ಪಂಚಾಯತಿಗೆ, ಲಿಂಗಸುಗೂರು ತಾಲೂಕಿನ ಕಾಳಾಪೂರ ಗ್ರಾಮ ಪಂಚಾಯತಿಯ ಪಿಡಿಒ ಅಮರಗುಂಡಮ್ಮ ಅವರನ್ನು ನೀರಲಕೇರಾ ಗ್ರಾಮ ಪಂಚಾಯತಿಗೆ ಹಾಗೂ ನೀರಲಕೇರಾ ಗ್ರಾಮ ಪಂಚಾಯತಿಯ ಪಿಡಿಒ ಮಹೇಶ ಅವರನ್ನು ಕಾಳಾಪೂರ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಲಾಗಿದೆ.

ಸಿರವಾರ ತಾಲೂಕಿನ ಹರವಿ ಗ್ರಾಮ ಪಂಚಾಯತಿ ಪಿಡಿಒ ಅಕ್ತರ್ ಪಾಷಾ ಅವರನ್ನು ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮ ಪಂಚಾಯತಿಗೆ, ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮ ಪಂಚಾಯತಿ ಪಿಡಿಒ ತಿಮ್ಮಣ್ಣ ಅವರನ್ನು ದೇವದುರ್ಗ ತಾಲೂಕಿನ ಮುಂಡರಗಿ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಲಾಗಿದೆ.

Advertisements

ಸಿರವಾರ ತಾಲೂಕಿನ ಹಿರಾ ಗ್ರಾಮ ಪಂಚಾಯತಿ ಪಿಡಿಒ ಪ್ರಭು ಕುಮಾರ ಟಿ ಅವರನ್ನು ಮಾನವಿ ತಾಲೂಕಿನ ಸಾದಾಪೂರ ಗ್ರಾಮ ಪಂಚಾಯತಿಗೆ, ಗಿಲ್ಲೆಸೂಗುರು ಪಿಡಿಒ ರವಿ ಕುಮಾರ ಅವರನ್ನು ದೇವಸುಗೂರು ಗ್ರಾಮ ಪಂಚಾಯತಿಗೆ, ದೇವದುರ್ಗ ತಾಲೂಕಿನ ಗಲಗ ಗ್ರಾಮ ಪಂಚಾಯತಿ ಪಿಡಿಒ ಚನ್ನಪ್ಪ ವರನ್ನು ರಾಯಚೂರು ತಾಲೂಕಿನ ಹೀರಾಪೂರ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಲಾಗಿದೆ.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್, ರಾಯಚೂರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

Download Eedina App Android / iOS

X