ಚೈತ್ರ ಕುಂದಾಪುರ ವಂಚನೆ ಪ್ರಕರಣ | ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು

Date:

Advertisements
  • ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು
  • ಇಂತಹ ಸೂಟ್‌ ಕೇಸ್ ವ್ಯವಹಾರ ನಿರಂತರವಾಗಿ ನಡೆಯುತ್ತವೆ

ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದೆಂದು 5 ಕೋಟಿ ರೂ. ಹಣ ಪಡೆದುಕೊಂಡು ವಂಚಿಸಿರುವ ಆರೋಪ ಹೊತ್ತ ಚೈತ್ರ ಕುಂದಾಪುರ ಮತ್ತು ಆಕೆಯ ಸಂಗಡಿಗರು ಹಾಗೂ ಹಣ ನೀಡಿರುವ ಗೋವಿಂದ್ ಬಾಬು ಪೂಜಾರಿ ಅವರುಗಳ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು ನೀಡಿದೆ.

ಬುಧವಾರ ದೂರು ನೀಡಿರುವ ಕೆಆರ್‌ಎಸ್ ಪಕ್ಷ, ಅಕ್ರಮ ಹಣ ವರ್ಗಾವಣೆ ಬಗ್ಗೆ ಮತ್ತು ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಆಗ್ರಹಿಸಿದೆ.

“ಬಿಜೆಪಿ ಸೇರಿದಂತೆ, ಬಹುತೇಕ ಪ್ರಮುಖ ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ ಪಾಲಿಸದೆ ಹಾಗೂ ಸ್ಪರ್ಧಾಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕ ರೀತಿಯಲ್ಲಿ ನಡೆಸದೆ ಇರುವುದೇ ಇಂದು ಈ ಪಕ್ಷಗಳಲ್ಲಿ ಇಂತಹ ಸೂಟ್‌ ಕೇಸ್ ವ್ಯವಹಾರಗಳು ನಿರಂತರವಾಗಿ ನಡೆಯಲು ಸಾಧ್ಯವಾಗಿದೆ. ಇದು ಕೇವಲ ಚೈತ್ರ ಕುಂದಾಪುರ ಮಾತ್ರವಲ್ಲದೆ, ಬಿಜೆಪಿ ಸೇರಿದಂತೆ ಇತರ ಪಕ್ಷಗಳಲ್ಲೂ ಇದೇ ರೀತಿಯ ಅವ್ಯವಹಾರಗಳು ನಡೆಯುತ್ತಿವೆ. ಈ ಬಗ್ಗೆ ಪ್ರಮುಖ ಪಕ್ಷಗಳು ಗಂಭೀರವಾಗಿ ಚಿಂತಿಸಬೇಕು” ಎಂದು ದೂರಿನಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

“ಜೆಸಿಬಿ ಪಕ್ಷಗಳ ಭ್ರಷ್ಟಾಚಾರದ ಕಪ್ಪು ಹಣದ ರಾಜಕೀಯದ ಒಂದು ಸಣ್ಣ ಭಾಗ ಚೈತ್ರಾ ಕುಂದಾಪುರ ಅನ್ನುವ ಭ್ರಷ್ಟಾಚಾರಿಯ ಮೂಲಕ ತಂತಾನೇ ಬಯಲಾದರೂ, ಅದನ್ನು ಸೂಕ್ತ ತನಿಖಾ ಸಂಸ್ಥೆ ತನಿಖೆ ಮಾಡದಿದ್ದಲ್ಲಿ ಅದರಲ್ಲಿ ಭಾಗಿಯಾಗಿರುವ ಇತರ ದೊಡ್ಡ ಕುಳಗಳು ತಪ್ಪಿಸಿಕೊಳ್ಳುತ್ತವೆ” ಎಂದು ಕೆಆರ್‌ಎಸ್ ಪಕ್ಷ ದೂರಿನಲ್ಲಿ ವಿವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X