90ರಲ್ಲಿ ಮೂವರು ಮಾತ್ರ ಒಬಿಸಿ ಅಧಿಕಾರಿಗಳು: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಸೇರ್ಪಡೆಗೆ ರಾಹುಲ್ ಒತ್ತಾಯ

Date:

Advertisements

ದೇಶಾದ್ಯಂತ ಇರುವ 90 ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಲ್ಲಿ ಒಬಿಸಿ ಸಮುದಾಯದವರ ಸಂಖ್ಯೆ ಕೇವಲ ಮೂವರು ಮಾತ್ರ. ಇವರು ಭಾರತದ ಬಜೆಟ್‌ನ ಶೇ.5 ರಷ್ಟು ಮಾತ್ರ ನಿಯಂತ್ರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಸತಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಅವರು, “ಕಾರ್ಯದರ್ಶಿಗಳಲ್ಲಿ ಒಬಿಸಿ ಅಧಿಕಾರಿಗಳು ಎಷ್ಟಿದ್ದಾರೆ ಎಂದು ಕೇಳಿ ಉತ್ತರ ತಿಳಿದುಕೊಂಡಾಗ ನಾನು ಆಘಾತಕ್ಕೊಳಗಾದೆ. ಕೇವಲ ಮೂವರು ಮಾತ್ರ ಒಬಿಸಿ ಅಧಿಕಾರಿಗಳಿದ್ದು ಬಜೆಟ್‌ನ ಶೇ. 5 ರಷ್ಟು ಹಣ ಮಾತ್ರ ಅವರು ನಿಯಂತ್ರಿಸುತ್ತಾರೆ. ಇದು ಅವಮಾನ ಮತ್ತು ಅಪಮಾನಕರವಾದ ವಿಷಯವಾಗಿದೆ” ಎಂದು ತಿಳಿಸಿದರು.

“ದೇಶದಲ್ಲಿ ಎಷ್ಟು ಮಂದಿ ಒಬಿಸಿ, ದಲಿತರು ಮತ್ತು ಆದಿವಾಸಿಗಳಿದ್ದಾರೆ ಎಂದು ಪ್ರಶ್ನಿಸಿದ ಅವರು, ಜಾತಿ ಗಣತಿ ಬಳಸಿ ಮಾತ್ರ ಈ ಸಂಖ್ಯೆಯ ನಿಖರತೆಯನ್ನು ನಿರ್ಧರಿಸಲು ಸಾಧ್ಯ. ಪ್ರತಿಪಕ್ಷಗಳು ಜಾತಿ ಗಣತಿ ವಿಷಯ ಎತ್ತುವ ಕ್ಷಣದಲ್ಲಿ ಬಿಜೆಪಿಯು ಹೊಸ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ” ಎಂದು ರಾಹುಲ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಹದೆಗೆಟ್ಟ ರಾಜತಾಂತ್ರಿಕ ಸಂಬಂಧ; ಕೆನಡಾದಲ್ಲಿರುವ ಭಾರತೀಯ ನಾಗರಿಕರಿಗೆ ಸಲಹೆ

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೋಟಾಕ್ಕೆ ಒತ್ತಾಯಿಸಿದ ರಾಹುಲ್ ಗಾಂಧಿ, ಈ ಸಮುದಾಯಕ್ಕೆ ಕೋಟಾದ ಕೊರತೆಯಿಂದಾಗಿ ಮೀಸಲಾತಿ ಉದ್ದೇಶ ಅಪೂರ್ಣವಾಗುತ್ತದೆ. ಮಹಿಳಾ ಮೀಸಲಾತಿ ಮಸೂದೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಕೋಟಾವನ್ನು ನೀಡಬೇಕು. ಅಲ್ಲದೆ ಜಾತಿ ಜನಗಣತಿ ಅಂಕಿಅಂಶವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಹೊಸ ಸಂಸತ್ತಿನ ಕಟ್ಟಡಕ್ಕೆ ಕಲಾಪಗಳನ್ನು ವರ್ಗಾವಣೆ ಮಾಡುವಾಗ ರಾಷ್ಟ್ರಪತಿಯನ್ನು ಆಹ್ವಾನಿಸಬೇಕಿತ್ತು ಎಂದೂ ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಹೇಳಿದರು.

“ಇದು ಸಾಕಷ್ಟು ಸುಂದರವಾದ ಕಟ್ಟಡ, ನೆಲದ ಮೇಲೆ ಮತ್ತು ಕುರ್ಚಿಯಲ್ಲಿ ಸುಂದರವಾದ ನವಿಲುಗಳ ಚಿತ್ರವನ್ನು ಕೆತ್ತಲಾಗಿದೆ. ಆದರೆ ನಾನು ಒಬ್ಬ ಮಹಿಳೆಯಾಗಿರುವ ಭಾರತದ ರಾಷ್ಟ್ರಪತಿಯನ್ನು ನೋಡಲು ಇಷ್ಟಪಡುತ್ತೇನೆ. ಅವರು ಬುಡಕಟ್ಟು ಸಮುದಾಯವನ್ನು ಪ್ರತಿನಿಧಿಸುತ್ತಾರೆ. ಒಂದು ಸದನದಿಂದ ಇನ್ನೊಂದು ಸದನಕ್ಕೆ ವರ್ಗಾವಣೆಯಾಗುವಾಗ ಅವರು ಕಾಣಿಸಿಕೊಳ್ಳುವುದು ಸೂಕ್ತವಾಗಿತ್ತು” ಎಂದು ರಾಹುಲ್‌ ಗಾಂಧಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X