ದಾವಣಗೆರೆ | ಗಣೇಶ ಹಬ್ಬ: ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

Advertisements

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆಯಲ್ಲಿ ವಿನಾಯಕ ಹಾಗೂ ಬಸವೇಶ್ವರ ಯುವಕರ ಸಂಘವು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಿದೆ. ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್ ಟಿ.ಜಿ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆದಿದೆ.

ಗ್ರಾಮದಲ್ಲಿ ಸಂಘವು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದೆ. ಅದರ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆದಿದ್ದು, ಗ್ರಾಮದ ಹಲವಾರು ಯುವಜನರು ರಕ್ತದಾನ ಮಾಡಿದ್ದಾರೆ.

ಶಿಬಿರವನ್ನು ಉದ್ದೇಶಿಸಿ ಮಾನತಾಡಿದ ಡಾ. ರವಿಕುಮಾರ್‌, “ವೇಗದ ಮತ್ತು ಆಧುನಿಕ ಜಗತ್ತಿನಲ್ಲಿ ‘ಎಲ್ಲ ಸಂಪತ್ತು, ಐಶ್ವರ್ಯಕ್ಕಿಂತಲೂ ಆರೋಗ್ಯವೇ ಭಾಗ್ಯ’ ಎಂಬ ಸತ್ಯ ಎಲ್ಲರಿಗೂ ಈಗ ಅರ್ಥವಾಗಿದೆ. ಆದರೆ, ಕೆಲಸದ ಒತ್ತಡ, ಸಮಯದ ಅಭಾವ ಮತ್ತು ಆಸ್ಪತ್ರೆಗಳ ಅಲಭ್ಯತೆ ಕಾರಣದಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದರೆ, ಇದರಿಂದಾಗಿ ಅನಿರೀಕ್ಷಿತವಾಗಿ ದೊಡ್ಡ ಅಪಾಯಗಳು ಎದುರಾಗುವ ಸಂಭವ ಹೆಚ್ಚಿರುತ್ತದೆ. ಇದರ ಭಾಗವಾಗಿಯೇ ಇತ್ತೀಚಿಗೆ ಹೃದಯಾಘಾತ, ಮಧುಮೇಹ. ರಕ್ತದೊತ್ತಡ, ಕ್ಯಾನ್ಸರ್‌ನಂತಹ ಸಮಸ್ಯೆಗಳು ಎದುರಾಗುತ್ತಿವೆ” ಎಂದರು.

Advertisements

“ಸಂತೋಷಕರ ಜೀವನಕ್ಕೆ ಆರೋಗ್ಯವಂತ ದೇಹ ಮತ್ತು ಮನಸು ಮುಖ್ಯವಾಗುತ್ತದೆ. ಹಾಗಾಗಿ, ದೈನಂದಿನ ಕ್ರಮದಲ್ಲಿ ಉತ್ತಮ ಹವ್ಯಾಸ-ಆಹಾರಪದ್ಧತಿ, ಯೋಗ, ಧ್ಯಾನಗಳನ್ನು ರೂಢಿಸಿಕೊಳ್ಳ ಬೇಕು. ಜತೆಗೆ ಕರುಣೆ, ಸ್ನೇಹ, ಪರೋಪಕಾರ, ಪ್ರೀತಿಯೆಂಬ ಭಾವನೆಗಳನ್ನು ಮನಸ್ಸನ್ನು ಸದಾ ಆರೋಗ್ಯವಾಗಿ ಇರಿಸುತ್ತವೆ” ಎಂದು ಹೇಳಿದರು.

ತಪಾಸಣೆ ಶಿಬಿರದಲ್ಲಿ ಜಗಳೂರಿನ ಮಾಜಿ ಶಾಸಕ ಗುರುಸಿದ್ಧನಗೌಡ, ವೈದ್ಯರಾದ ಶಾಹಿದ್, ಉದ್ಯಮಿಗ ಳಾದ ನಾಗರಾಜ ಸ್ವಾಮಿ, ಟ್ರಸ್ಟ್ ಸಿಬ್ಬಂದಿಗಳಾದ ನುಂಕೇಶ್, ಪವನ್ ಶೇಪೂರ್, ಶ್ವೇತಾ, ಗೌರಿ, ವಿಜಯ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X