ಬೆಂಗಳೂರು | ಗಣೇಶ ವಿಸರ್ಜನೆ ಮೆರವಣಿಗೆ; ಅ.1 ರವರೆಗೆ ಮದ್ಯ ಮಾರಾಟ ನಿಷೇಧ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 1 ರವರೆಗೆ ನಗರದ ನಾನಾ ಪೊಲೀಸ್ ವಿಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಆದೇಶಿಸಿದೆ.

ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕುಡಿದ ಅಮಲಿನಲ್ಲಿ ನಡೆಯುವ ಗಲಾಟೆಗಳನ್ನು ತಡೆಯಲು ಬೆಂಗಳೂರಿನ ಕೇಂದ್ರ, ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್ ಶಾಪ್ ​ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ನಿಟ್ಟಿನಲ್ಲಿ ಅಕ್ಟೋಬರ್ 1ರವರೆಗೆ ಬೆಂಗಳೂರಿನ ನಾನಾ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವಂತೆ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಇಎಸ್‌ಐ ಯೋಜನೆಗೆ ಕಾರ್ಮಿಕರ ವೇತನ ಮಿತಿ ₹21 ಸಾವಿರದಿಂದ ₹50 ಸಾವಿರಕ್ಕೆ ಏರಿಕೆ ಮಾಡಿ; ಕಾರ್ಮಿಕರ ಪ್ರತಿಭಟನೆ

  • ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯ ನಗರದಲ್ಲಿ ಸೆಪ್ಟೆಂಬರ್ 21ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 22ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.
  • ಪೂರ್ವ ವಿಭಾಗದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿ ನಗರ, ಹೆಣ್ಣೂರು, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6 ರಿಂದ ಸೆ.24ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಲಾಗಿದೆ.
  • ಸೆಪ್ಟೆಂಬರ್ 24ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 25ರ ಬೆಳಗ್ಗೆ 6 ಗಂಟೆವರೆಗೆ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧವಿರಲಿದೆ.
  • ಸೆಪ್ಟೆಂಬರ್ 23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಬೆಂಗಳೂರಿನ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಕೊಡಿಗೆಹಳ್ಳಿ, ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಹೇರಲಾಗಿದೆ.
  • ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರವರೆಗೆ ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X