ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ; ರೈತ ಸಂಘ ಆಕ್ರೋಶ

Date:

Advertisements
  • ಸೂರತ್ – ಚೆನೈ ಮಧ್ಯೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ
  • ಅಂಡರ್ ಪಾಸ್ ರಸ್ತೆ ನಿರ್ಮಿಸಿ ರೈತರ ಜಮೀನುಗಳಿಗೆ ತೆರಳಲು ಅನುಕೂಲ ಮಾಡಿಕೊಡಬೇಕು.

ಗ್ರಾಮೀಣ ಭಾಗದಲ್ಲಿ ಹಾದು ಹೋಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರೈತರ ಜಮೀನುಗಳಿಗೆ ರಸ್ತೆ ಬಂದ್ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಚಿಕ್ಕಸೂಗೂರು ಬಳಿ ರೈತರು ಪ್ರತಿಭಟನೆ ನಡೆಸಿದರು.

“ಸೂರತ್ – ಚೆನೈ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡುತ್ತಿರುವ ಅಶೋಕ್ ಬುಲ್ಡಿಕಾನ್ ಲಿಮಿಟೆಡ್ ಮತ್ತು ಭಾರತ ವಾಣಿಜ್ಯ ಈಸ್ಟರ್ನ್ ಪ್ರೈವೇಟ್ ಲಿಮಿಟೆಡ್ ಗುತ್ತಿಗೆದಾರರು ಸ್ಥಳಿಯ ರೈತರ ಜಮೀನುಗಳಿಗೆ ಹೋಗುವ ರಸ್ತೆಯನ್ನು ಬಂದ್ ಮಾಡಿದ್ದರಿಂದ ರೈತರು ತಮ್ಮ ಜಮೀನುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ” ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಮುಂಗಾರು ಬಿತ್ತನೆ ಮಾಡಬೇಕಾದ ರೈತರು ಇವರ ದಬ್ಬಾಳಿಕೆಯಿಂದ ಕೈಕಟ್ಟಿ ಕುಳಿತಿದ್ದಾರೆ, ಹೆದ್ದಾರಿ ರಸ್ತೆ ಹಾದು ಹೋಗಿದ್ದು, ಕೆಳ ಭಾಗದಲ್ಲಿ ಕೆಲವು ಕಡೆ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಿದ್ದು ಅವೈಜ್ಞಾನಿಕವಾಗಿದೆ” ಎಂದು ಆರೋಪಿಸಿದರು.

Advertisements

“ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಬೇಕು, ಆದರೆ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಿದ್ದಾರೆ. ಇದರಿಂದ ರೈತರು ಓಡಾಡಲು ತೊಂದರೆಗೆ ಸಿಲುಕಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಎರಡು ಬದಿಯಲ್ಲಿ ಅಂಡರ್ ಪಾಸ್ ರಸ್ತೆ ಮಾಡಬೇಕು, ರೈತರು ತಮ್ಮ ಜಮೀನಿಗೆ ಹೋಗಲು ಅನುಕೂಲ ಮಾಡಿಕೊಡಬೇಕು, ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆಯ ಮೇಲಿಂದ ಬಿದ್ದು ಮಹಿಳೆ ಸಾವು; ಕೊಲೆ ಶಂಕೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಬೂದಯ್ಯಸ್ವಾಮಿ, ಲಿಂಗಾರೆಡ್ಡಿ, ಬಸವರಾಜ ಪಾಟೀಲ್, ಗೋವಿಂದಪ್ಪ ನಾಯಕ, ಸಿದ್ದಯ್ಯ ಸ್ವಾಮಿ, ದೇವರಾಜ ನಾಯಕ, ಶಂಕ್ರಪ್ಪ ಗೌಡ, ತಿಮ್ಮಣ್ಣ ನಾಯಕ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X