ಕಾವೇರಿ ವಿವಾದ | ಸೆ.23ಕ್ಕೆ ‘ಮಂಡ್ಯ ಬಂದ್‌’ಗೆ ಕರೆ

Date:

Advertisements

ತಮಿಳುನಾಡಿಗೆ ಮುಂದಿನ 15 ದಿನ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರೈತರು, ಸೆ.23ರಂದು ಮಂಡ್ಯ ಬಂದ್‌ಗೆ ಕರೆ ನೀಡಿದ್ದಾರೆ.

ಸುಪ್ರೀಂ ನಿರ್ದೇಶನದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು, ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಲಗಿ ರೈತರು ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು.

Advertisements

ಈ ನಡುವೆ ಸುಪ್ರೀಂ ಕೋರ್ಟಿನ ಆದೇಶವನ್ನು ಧಿಕ್ಕರಿಸಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು, ಸೆ.23ರ ಶನಿವಾರ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

ಬಂದ್‌ ಕರೆಯ ಹಿನ್ನೆಲೆಯಲ್ಲಿ ಬಂದ್ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾಮಾಜಿಕ ಹೋರಾಟಗಾರರೊಂದಿಗೆ ಸೆ.22ರಂದು ಸಭೆ ಕೂಡ ಕರೆಯಲಾಗಿದೆ.

ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಮತ್ತೆ ಆದೇಶ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರದ ಕಾನೂನು ತಜ್ಞರು ವಿಫಲವಾಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X