ರಾಯಚೂರು | ಹಾರುಬೂದಿ ಸಾಗಾಟ ಹೆಚ್ಚಳ; ಅಕ್ರಮ ಸಾಗಾಟ ವಾಹನದ ಪರವಾನಗಿ ರದ್ದಿಗೆ ಆಗ್ರಹ

Date:

Advertisements

ರಾಯಚೂರು ಶಾಖೋತ್ಪನ್ನ ಕೇಂದ್ರದಿಂದ ಸಾಗಾಣೆಯಾಗುತ್ತಿರುವ ಹಾರುಬೂದಿಯನ್ನು ಓವರ್ ಲೋಡ್ ಮಾಡಿ ಸಾಗಾಣೆ ಮಾಡುತ್ತಿರುವ ವಾಹನಗಳ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿ ಮೂಲನಿವಾಸಿ ಡಾ. ಅಂಬೇಡ್ಕರ್ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ನಿತ್ಯವೂ 700ಕ್ಕೂ ಅಧಿಕ ಲಾರಿಗಳು ಹಾರುಬೂದಿ ಸಾಗಿಸುತ್ತಿದ್ದು, 28.85ಟನ್ ಸಾಗಿಸುವ ಬದಲಾಗಿ 70ಟನ್‌ನಷ್ಟು ಹಾರುಬೂದಿ ಸಾಗಾಣೆ ಮಾಡಲಾಗುತ್ತಿದೆ. ಪರವಾನಿಗೆಯಿಲ್ಲದೆ ಓವರ್ ಲೋಡ್ ಸಾಗಾಣೆಯಿಂದ ರಸ್ತೆಗಗಳು ಹಾಳಾಗುವುದರ ಜೊತೆಗೆ ಅಪಘಾತ ಹೆಚ್ಚಳವಾಗುವ ಸಾಧ್ಯತೆಗಳಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರವಾನಿಗೆಯಿಲ್ಲದೆ ಓವರ್ ಲೋಡ್ ಸಾಗಾಣೆ ಮಾಡುತ್ತಿರುವ ವಾಹನ ಚಾಲಕರು ಮತ್ತು ಮಾಲೀಕರ ವಿರುದ್ಧ ಪೊಲೀಸ್, ಪರಿಸರ, ಸಾರಿಗೆ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ವರ್ಗಾವಣೆಯಾಗಿರುವ ಶಿಕ್ಷಕರನ್ನು ಬಿಡುಗಡೆಗೊಳಿಸದಂತೆ ಎಸ್‌ಎಫ್‌ಐ ಆಗ್ರಹ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಭರತಕುಮಾರ, ಎನ್ ಸುಶೀಲ್ ಕುಮಾರ್, ಹನುಮೇಶ ಕೊಲಮಿ, ಎಂ ಡಿ ಹಾಜಿ, ವೀರೇಶ, ರಾಜು ಅಸ್ಕಿಹಾಳ, ತಿಮ್ಮಪ್ಪ, ಕಿಶೋರಕುಮಾರ, ಹನುಮಂತ, ವೆಂಕಟೇಶ ಸೇರಿದಂತೆ ಬಹುತೇಕರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X