ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

Date:

Advertisements

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌ ರಾಜ್ಯ ಹೆದ್ದರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘ ಕರೆದಿದ್ದ ಪ್ರತಿಭಟನೆಗೆ ನೂರಾರು ರೈತರು ಬೆಂಬಲಿಸಿದ್ದು ಕೆರೂರು ಕ್ರಾಸ್‌ ಬಳಿ ರಸ್ತೆ ತಡೆ ನಡೆಸಿದ್ದಾರೆ.

ರಾಜ್ಯ ಹೆದ್ದಾರಿ ತಡೆದ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ರೈತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ನಾಲೆ ನೀರು ಬಿಡದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಪರಗೌಡ, “ರೂಪಿನಾಳ, ಕೆರೂರು, ಜೋಡಕುರಳಿ, ಅರಬ್ಯನವಾಡಿ ಗ್ರಾಮಗಳಿಗೆ ಘಟಪ್ರಭಾ ಎಡದಂಡೆ ನಾಲೆಯ ನೀರು ಹರಿಸಿದರೆ ಇಲ್ಲಿನ ರೈತರಿಗೆ ಅನುಕೂಲವಾಗಲಿದೆ ಎಂದು ಮನವಿ ಸಲ್ಲಿಸಿದ್ದೇವೆ.

Advertisements

ಆದರೆ, ಕಾಳುವೆಗೆ ನೀರು ಬರದ ಕಾಋಣ ರೈತರು ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ನೀರು ಬಿಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ,” ಎಂದಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ರೈತ ಮುಖಂಡರು, ಮಳೆ ಬರದ ಕಾರಣ, ಬೆಳೆಗಳೇಲ್ಲ ಒಣಗಲಾರಂಭಿಸಿವೆ. ಜಮೀನುಗಳಿಗೆ ನೀರುಣಿಸಲು ಕಾಲುವೆಗಳಲ್ಲಿ ನೀರು ಸಹ ಇಲ್ಲ. ಈ ಕೂಡಲೇ ನಾಲೆಗೆ ನೀರು ಹರಿಸಿ. ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಿ ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ನೀರಾವರಿ ಅಧಿಕಾರಿ ನಾಗೇಶ ಕೋಲ್ಕಾರ,”ನೀರಾವವರಿ ಸಲಹಾ ಸಮಿತಿ ಇದೆ. ಬೇಡಿಕೆಗನುಗುಣವಾಘಿ ನೀರು ಬಿಡಲು ಆದೇಶಿಸಿದ್ದಾರೆ. ಸಲಹಾ ಸಮಿತಿ ಒಪ್ಪಿದ ಕೂಡಲೇ ನೀರು ಬಡಲಾಗುತ್ತದೆ. ಕಾಳುವೆಗಳನ್ನು ಸ್ವಚ್ಚ ಗೊಳಿಸಿ ನೀರುಹರಿಸಲಾಗುವುದು. ಮುಂದಿನ ಎಂಟು ದಿನದೊಳಗೆ ಕೆರೂರು ಗ್ರಾಮಕ್ಕೆ ನೀರು ಹರಿಸುವ ಭರವಸೆ ಇದೆ,” ಎಂದು ರೈತರನ್ನು ಸಮಾಧಾನ ಪಡಿಸುವ ಯತ್ನ ಮಾಡಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.   

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗಡಾಡಿ, ಅಥಣಿ ರೈತ ಸಂಘದ ಅಧ್ಯಕ್ಷ ಮಹಾದೇವ ಮಡಿವಾಳ, ದುಂಡಪ್ಪ ಹಿಂಗ್ಲಾಜೆ, ಪ್ರತಾಪ ಪಾಟೀಲ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರಿ ಬಿಗಿ ಪೊಲೀಸ್‌ ಬಂದೋಬಸ್ತ ಏರ್ಪಡಿಸಲಾಗಿತ್ತು. ಒಬ್ಬ ಡಿಎಆರ್‌, ಎರಡು ಕೆಎಸ್‌ಆರ್‌ಪಿ ತುಕಡಿ, ಒಬ್ಬರು ಡಿವೈಎಸ್‌ಪಿ, ಸಿಪಿಐ, ನಾಲ್ವರು ಪಿಎಸ್‌ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X