ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ; ರೈತರು ಕಂಗಾಲು

Date:

Advertisements

ಕಳೆದ ಎರಡು ತಿಂಗಳುಗಳ ಹಿಂದೆ ಚಿನ್ನದ ಬೆಲೆ ಕಂಡಿದ್ದ ಟೊಮೆಟೊ ದರ ಈಗ ಭಾರೀ ಕುಸಿತ ಕಂಡಿದೆ. ಜುಲೈ-ಆಗಸ್ಟ್‌ನಲ್ಲಿ 2.5 ಸಾವಿರ ರೂ.ಗೆ ಮಾರಾಟವಾಗಿದ್ದ 15 ಕೆ.ಜಿ ಬಾಕ್ಸ್‌ ಟೊಮೆಟೊ, ಇದೀಗ 50 ರಿಂದ 100 ರೂ.ಗೆ ಕುಸಿದಿದೆ. ಟೊಮೆಟೊ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ.

ಟೊಮೆಟೊ ಬೆಲೆ ಏರಿಕೆಯಾಗಿದ್ದ ಸಂದರ್ಭದಲ್ಲಿ ಹಲವಾರು ರೈತರು ಟೊಮೆಟೊ ಬೆಳೆಯತ್ತ ಮುಖಮಾಡಿದ್ದರು. ಟೊಮೆಟೊ ಬಿತ್ತನೆಯೂ ಭಾರೀ ಪ್ರಮಾಣದಲ್ಲಿ ನಡೆದಿತ್ತು. ಆದರೆ, ಆ ಬೆಳೆ ರೈತರ ಕೈಸೇರುವಷ್ಟದಲ್ಲಿ ಬೆಲೆ ಕುಸಿತ ಕಂಡಿದೆ.

ಜುಲೈ ತಿಂಗಳಿನಲ್ಲಿ ಬೇಡಿಕೆಗೆ ತಕ್ಕಷ್ಟು ಟೊಮೆಟೊ ಧಾರಣೆ ಇಲ್ಲದೆ, ಬೆಲೆ ಏರಿಕೆಯಾಗಿತ್ತು. ನೆರೆಯ ರಾಷ್ಟ್ರ ನೇಪಾಳದಿಂದ ಟೊಮೆಟೊ ಆಮದು ಮಾಡಿಕೊಳ್ಳಲಾಗಿತ್ತು. ಇದೀಗ, ರಾಜ್ಯದಲ್ಲಿ ಟೊಮೆಟೊ ಇಳುವರಿ ಹೆಚ್ಚಾಗಿದೆ. ಜೊತೆಗೆ, ನೆರೆಯ ರಾಜ್ಯಗಳಿಂದಲೂ ರಾಜ್ಯದ ಮಾರುಕಟ್ಟೆಗೆ ಟೊಮೆಟೊ ಬಂದಿದೆ. ಹೀಗಾಗಿ, ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತವಾಗಿದೆ.

Advertisements

ಟೊಮೆಟೊ ಬೆಳೆಯಲು ಎಕರೆಗೆ 1.5 ಲಕ್ಷದಿಂದ 2 ಲಕ್ಷ ರೂ.ವರೆಗೆ ಖರ್ಚಾಗುತ್ತದೆ. ಆದರೆ, ಬೆಲೆ ಕುಸಿತ ಕಂಡಿದ್ದು, ಹಾಕಿರುವ ಬಂಡವಾಳವೂ ಕೈಸೇರುವುದೋ-ಇಲ್ಲವೋ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಚನ್ನರಾಯಪಟ್ಟಣ ತಾಲೂಕಿನ ರೈತ ಪ್ರಭಾಕರ್, “ಸಾಲ ಮಾಡಿ 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದೆ. ಉತ್ತಮ ಇಳುವರಿಯೂ ಬಂದಿದೆ. ಆದರೆ, ಬೆಲೆ ಕುಸಿತದಿಂದಾಗಿ ಮಾಡಿದ ಸಾಲ ತೀರಿಸಲು ಆಗುತ್ತದೋ-ಇಲ್ಲವೋ ಗೊತ್ತಿಲ್ಲ. ಟೊಮೆಟೊವನ್ನು ಕೊಯ್ಯಲು ಯೋಚಿಸುವ ಪರಿಸ್ಥಿತಿ ಇದೆ. ಟೊಮೆಟೊ ಕೊಯ್ದು, ಮಾರುಕಟ್ಟೆ ಸಾಗಿಸಲು ಮತ್ತಷ್ಟು ವೆಚ್ಚವಾಗುತ್ತದೆ. ಹೀಗಾಗಿ, ಏನು ಮಾಡಬೇಕೆಂಬುದೇ ತೋಚುತ್ತಿಲ್ಲ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X