ರಾಮನಗರ | ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

Date:

Advertisements
  • ನಾವು ಯಾರನ್ನೂ ಹತ್ಯೆ ಮಾಡಿಲ್ಲ; ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಲಿದೆ
  • ಎಚ್‌ಡಿಕೆ, ಸಿದ್ದರಾಮಯ್ಯ, ಡಿಕೆಶಿ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ

ರಾಮನಗರ ಜಿಲ್ಲೆಯ ಕನಕಪುರ ಬಳಿಯ ಸಾತನೂರು ಸಮೀಪ ಹಸು ಸಾಗಿಸುತ್ತಿದ್ದ ಇದ್ರೀಸ್‌ ಪಾಷ ಅವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾದ ಪ್ರಕರಣದ ಪ್ರಮುಖ ಆರೋಪಿ, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ” ಎಂದು ಹೇಳಿದ್ದಾನೆ.

Advertisements

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ

“ಮಂಡ್ಯದಿಂದ ಹಲಗೂರು, ಸಾತನೂರು ಮಾರ್ಗವಾಗಿ ನಿರಂತರವಾಗಿ ಜಾನುವಾರು ಸಾಗಣೆ ಆಗುತ್ತಿದ್ದು, ಇದಕ್ಕೆ ರಾಜಕಾರಣಿಗಳ ಕೃಪಾಕಟಾಕ್ಷವೂ ಇದೆ. ಇದ್ರೀಸ್‌ ಪಾಷನನ್ನು ನಾನು ಹತ್ಯೆ ಮಾಡಿದ್ದೇನೆಂದು ಹೇಳಲಾಗುತ್ತಿದೆ. ಎಫ್‌ಐಆರ್‌ ಪ್ರತಿಯನ್ನು ತಿದ್ದುಪಡಿ ಮಾಡಲಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಸತ್ಯಾಂಶವನ್ನು ಬಯಲಿಗೆಳೆಯಬೇಕು. ನನಗೆ ನ್ಯಾಯ ಬೇಕು” ಎಂದು ವಿಡಿಯೋದಲ್ಲಿ ಪುನೀತ್‌ ಕೆರೆಹಳ್ಳಿ ಹೇಳಿದ್ದಾನೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X