ಬೆಂಗಳೂರು | ಒತ್ತುವರಿ ಅರಣ್ಯ ಭೂಮಿ ವಶಕ್ಕೆ ವಿಶೇಷ ಕಾರ್ಯಪಡೆ ರಚನೆ; ಅರಣ್ಯ ಸಚಿವರ ಆದೇಶ

Date:

Advertisements

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಅರಣ್ಯ ಭೂಮಿಯ ಹಲವು ಪ್ರಕರಣಗಳಲ್ಲಿ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಅತಿಕ್ರಮಣಗೊಂಡಿರುವ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳುವಲ್ಲಿ ಉಂಟಾಗಿರುವ ಲೋಪದೋಷಗಳನ್ನು ಗಮನಿಸಿರುವ ಸಚಿವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅರಣ್ಯ ಭೂಮಿಯನ್ನು ಮರುಪಡೆಯಲು ಸಚಿವರು ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಸೂಚಿಸಿದ್ದಾರೆ.   

ಬೆಂಗಳೂರು ನಗರ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಸಮನ್ವಯದ ಜೊತೆಗೆ ಕಾನೂನು ಅಡೆತಡೆಗಳನ್ನು ನಿವಾರಿಸಿ ಮುಂದುವರೆಯಲಾಗುತ್ತದೆ. ಈ ಕಾರ್ಯಪಡೆಯಲ್ಲಿ ಅರಣ್ಯ, ಕಂದಾಯ, ನಗರಾಭಿವೃದ್ಧಿ, ಗೃಹ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳು ಹಾಗೂ ವಿಷಯ ತಜ್ಞರು ಇರಲಿದ್ದಾರೆ.

Advertisements

ಅರಣ್ಯ ಅತಿಕ್ರಮಣ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ತರುವಲ್ಲಿ ಪ್ರಾಮಾಣಿಕತೆ ಮತ್ತು ಬದ್ಧತೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಚಿವರು, ಅರಣ್ಯ, ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಅರ್ಜಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಯಪಡೆಯನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲೇ ಅತಿ ಹೆಚ್ಚು ಅರಣ್ಯ ಒತ್ತುವರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿರುವ ಸಚಿವರು, “ಒತ್ತುವರಿಯಾಗಿರುವ ಭೂಮಿ ತೆರವು ಮಾಡಲು ಕಂದಾಯ ಇಲಾಕೆಯೊಂದಿಗೆ ಸಹಕಾರ ಸಾಧಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ಸಂರಕ್ಷಿಸುವಲ್ಲಿ ಆಸಕ್ತಿ ತೋರಿಸಿಲ್ಲ. ಅರಣ್ಯ ಭವಿಷ್ಯದ ಪೀಳಿಗೆಗೆ ಅಮೂಲ್ಯ ಸಂಪತ್ತು,” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇಲಾಖೆಯ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಹಸಿರು ಹೊದಿಯ ನಷ್ಟ, ನಮ್ಮ ಮೇಲಷ್ಟೇ ಅಲ್ಲ, ಪರಿಸರ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಅತಿಕ್ರಮಣಗಳ ಸುತ್ತಲು ಇರುವ ವಿವಾದಗಳನ್ನು ಬಗೆಹರಿಸುವುದು ಮುಖ್ಯವಾಗಿದೆ ಮತ್ತು ಇದಕ್ಕೆ ಇನ್ನೂ ಹೆಚ್ಚು ಸಮಯ ಬೇಕಿದೆ. ರಾಜ್ಯದಲ್ಲಿಯೇ ಬೆಂಗಳೂರು ಅತಿ ಹೆಚ್ಚು ಅರಣ್ಯ ಭೂಮಿಯನ್ನು ಅತಿಕ್ರಮಿಸಿದೆ. ಆದ್ದರಿಂದ, ಇಲ್ಲಿ ಪ್ರತ್ಯೇಕ ಕಾರ್ಯಪಡೆಯ ಅಗತ್ಯವಿದೆ. ಉಳಿದ ಭಾಗಗಳಿಗೆ ಮತ್ತೊಂದು ಪಡೆಯನ್ನು ರಚಿಸಬೇಕಾಗಿದೆ ಎನ್ನುತ್ತಾರೆ ಅರಣ್ಯ ಸಚಿವರು.             

ಭೂ ಬಳಕೆಯ ನಮೂನೆ ಬದಲಾವಣೆಗಳ ದಾಖಲಾತಿಯ ಉಲ್ಲೇಖ ಮಾಡಿದ ಸಚಿವರು, ಅರಣ್ಯ ಭೂಮಿಯಲ್ಲಿನ ಬದಲಾವಣೆಗಳನ್ನು ದಾಖಲಿಸಲು ಮಾಹಿತಿ ತಂತ್ರಜ್ಞಾನ ಮತ್ತು ಉಪಗ್ರಹ ನಕ್ಷೆಯ ಇನ್‌ಪುಟ್‌ ಬಳಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಅಗತ್ಯ ದಾಖಲೆಗಾಗಿ ಅಕ್ರಮವಾಗಿ ಮರಗಳನ್ನು ಕಡಿಯುವುದು, ಅರಣ್ಯಭೂಮಿ ಒತ್ತುವರಿಮಾಡಿರುವವರ ಮೇಲೆ ಎಫ್‌ಐಆರ್‌ ದಾಖಲಿಸಲು ಯಾವುದೇ ನಿಬಂಧನೆ ಇಲ್ಲ. ಆದ್ದರಿಂದ, ಇಲಾಖೆಯಲ್ಲಿ ತ್ವರಿತ ಎಫ್‌ಐಆರ್‌ ನೋಂದಣಿ ಕಾರ್ಯವಿಧಾನ ರಚಿಸಲಾಗುವುದು. ಇಂತಹ ಸನ್ನಿವೇಶಗಳಲ್ಲಿ ಯಾವುದೆ ಅಡೆತಡೆಗಳಿಲ್ಲದೆ ಪ್ರಕರಣ ದಾಖಲಿಸಬಹುದು ಎಂದು ಸಚಿವರು ಪತ್ರದಲ್ಲಿ ಬರೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X