ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Date:

Advertisements

ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ ನೀಡಿದರು.

ʼವಿಶ್ವ ರೇಬಿಸ್ʼ ದಿನದ ಅಂಗವಾಗಿ ಲಸಿಕಾ ಅಭಿಯಾನ ನಡೆಡಿದೆ ರೇಬಿಸ್ ಲಸಿಕೆ ಹಾಕಿಸಿ ರೇಬಿಸ್ ರೋಗ ಮುಕ್ತ ವಲಯವನ್ನು ಮಾಡಬೇಕು. ಪ್ರಥಮ ಚಿಕಿತ್ಸೆ ರೈತರ ನಡುವೆ ಸಂಪರ್ಕ ಕೊಂಡಿಯಂತೆ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು. ಈ ಲಸಿಕಾ ಕಾರ್ಯಕ್ರಮ ಒಂದು ತೀಂಗಳುಗಳ ಕಾಲ ನಡೆಯಲಿದೆ. ಪಶು ಆಸ್ಪತ್ರೆಯ ಸಿಬ್ಬಂದಿ ಚಿಕ್ಕನರಗುಂದ, ಬೆನಕನಕೊಪ್ಪ, ಸಂಕಧಾಳ, ಅರಿಷಿನಗೋಡಿ, ಹಿರೇಕೊಪ್ಪ, ಕುರಗೋವಿನಕೊಪ್ಪ ಗ್ರಾಮದ ರೈತರ ಮನೆ ಬಾಗಿಲಿಗೆ ಬಂದು ಸೇವೆ ಸಲ್ಲಿಸಲಿದ್ದಾರೆ. ನಿಮ್ಮ ರಾಸುಗಳಿಗೆ ಲಸಿಕೆ ಹಾಕಲಿದ್ದಾರೆ. ಹೀಗಾಗಿ ಎಲ್ಲಾ ಗ್ರಾಮದ ರೈತರು ತಪ್ಪದೇ ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.

ಚಿಕ್ಕನರಗುಂದ ಪಶು ಚಿಕಿತ್ಸಾಲಯದ ವ್ಯಾಪ್ತಿಗೆ ಸೇರುವ ಆರು ಹಳ್ಳಿಗಳಲ್ಲಿನ 3,572 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಲಸಿಕೆದಾರರು 30 ದಿನಗಳ ಕಾಲ ಮನೆ ಮನೆಗಳಿಗೆ ತೆರಳಿ ಲಸಿಕೆ ಹಾಕುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಿ ಯಶಸ್ವಿಗೊಳಿಸಬೇಕು. ಎಲ್ಲ ರೈತರು ತಮ್ಮ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಬೇಕೆಂದು ಚಿಕ್ಕನರಗುಂದ ಪಶು ವೈದ್ಯಕೀಯ ಪರೀಕ್ಷಕ ವೈ.ಎಸ್.ಚಂದ್ರಗಿರಿ ತಿಳಿಸಿದರು.

Advertisements

ಈ ಸಂಧರ್ಭದಲ್ಲಿ ಶಿವಾನಂದ ಬಾಚಿ, ಮಂಜುನಾಥ ಹೂಲಿ, ಮಲ್ಲು ಹೊಸಗಾಣಿಗೇರ, ಶಿವು ಮೇಟಿ, ಚನ್ನಪ್ಪ ಹಡಪದ, ಪಶು ಚಿಕಿತ್ಸಾಲಯ ಸಿಬ್ಬಂದಿ, ಪಶು ಸಕಿಯರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X