ತಮಿಳುನಾಡಿಗೆ 300 ಕ್ಯೂಸೆಕ್ ನೀರು ಹರಿಸುವ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಈ ಕುರಿತು ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, “ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳವರೆಗೆ ಪುನಃ 3000 ಕ್ಯೂಸೆಕ್ ನೀರು ಬಿಡಬೇಕೆಂದು ಆದೇಶ ಮಾಡಿದೆ. ಸೆಪ್ಟೆಂಬರ್ 27 ರವರೆಗೆ ಆದೇಶ ಜಾರಿಯಲ್ಲಿದೆ. ಚರ್ಚಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.