ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

Date:

Advertisements
  • ಜೆಡಿಎಸ್ ಗೆಲುವೇ ಮುಖ್ಯ ಎಂದ ನಿಖಿಲ್
  • ಪಕ್ಷದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ

ಪಕ್ಷ ಹಾಗೂ ಪಕ್ಷದ ವರಿಷ್ಠರು ಹೇಳಿದಲ್ಲಿ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುವೆ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ, ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಅವರ ಹೇಳಿಕೆ ಈಗ ಪಕ್ಷದೊಳಗೆ ಹೊಸ ಸಂಚಲನ ಸೃಷ್ಟಿಸಿದೆ. ಜೊತೆಗೆ ಜೆಡಿಎಸ್‌ನೊಳಗೆ ಎಲ್ಲವೂ ಸರಿ ಇಲ್ಲವೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ನನ್ನ ತಾಯಿ ಅನಿತಾ ಕುಮಾರಸ್ವಾಮಿ ಚುನಾವಣೆ ಸ್ಪರ್ಧೆಗೆ ಟಿಕೆಟ್ ಕೇಳಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದು ಊಹಾಪೋಹದ ವಿಚಾರ. ಅನಿತಾ ಕುಮಾರಸ್ವಾಮಿಯವರು ಈಗಾಗಲೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಮರಳಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ನಿಖಿಲ್ ಹೇಳಿದರು.

Advertisements

ಮುಂದುವರೆದ ಅವರು ನಾವೆಲ್ಲರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಾದೇಶಿಕ ಪಕ್ಷವನ್ನು ಬೆಳೆಸಬೇಕೆನ್ನುವುದು ನಮ್ಮ ಗುರಿ. ಇದಕ್ಕಾಗಿ ನಾವು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ.

ಎಲ್ಲವಕ್ಕೂ ಕುಟುಂಬ ರಾಜಕಾರಣವನ್ನೇ ಬೊಟ್ಟು ಮಾಡು ತೋರಿಸುವುದು ಸರಿಯಲ್ಲ. ರಾಷ್ಟ್ರೀಯ ಪಕ್ಷಗಳಲ್ಲೂ ಈ ರಾಜಕಾರಣ ಇಲ್ಲವೇ, ಜೆಡಿಎಸ್‌ ಮಾತ್ರವೇ ಎಲ್ಲರ ಕಣ್ಣಿಗೆ ಕಾಣುತ್ತದೆಯೇ ಎಂದು ನಿಖಿಲ್‌ ಕಿಡಿಕಾರಿದರು.

ಎಲ್ಲರಂತೆ ನನಗೂ ಜನಪರ, ರೈತಪರ ನಾಯಕ ಎಚ್‌ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ. ಪಕ್ಷದ ಗೆಲುವೊಂದೇ ನಮಗೆ ಮುಖ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪಂಚರತ್ನ ಯೋಜನೆ ಜಾರಿಗೆ ತರಲು 4 ತಿಂಗಳಿಂದ ಎಚ್ಡಿಕೆ ಪ್ರಯತ್ನಿಸುತ್ತಿದ್ದಾರೆ. ಈ ಕಾರಣಕ್ಕಾದರೂ ನಮ್ಮ ಪಕ್ಷವನ್ನು ಜನ ಅಧಿಕಾರಕ್ಕೆ ತರಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?:ನಮ್ಮ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಗಾಲಿ ಜನಾರ್ದನ ರೆಡ್ಡಿ

ವರಿಷ್ಠರ ತೀರ್ಮಾನವೇ ಅಂತಿಮ:
ಹಾಸನ ಕ್ಷೇತ್ರಕ್ಕೆ ಟಿಕೆಟ್‌ ನೀಡುವ ವಿಚಾರದಲ್ಲಿನ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ನಿಖಿಲ್‌ ಕುಮಾರಸ್ವಾಮಿ, ಪಕ್ಷದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಇರುವುದು ಸಹಜ. ಆದರೆ ಇವೆಲ್ಲವನ್ನೂ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಈ ವಿಚಾರದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ ಎಂದು ನಿಖಿಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X