ರಾಯಚೂರು | ಹೊಸ ಮದ್ಯದಂಗಡಿಗೆ ಪರವಾನಗಿ ಪ್ರಸ್ತಾಪಕ್ಕೆ ಖಂಡನೆ; ಅ.1ರಂದು ಅಹೋರಾತ್ರಿ ಧರಣಿ

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಂದು ಸಾವಿರ ಹೊಸ ಮದ್ಯದಂಗಡಿ ಸ್ಥಾಪಿಸುವುದನ್ನು ವಿರೋಧಿಸಿ ಅಕ್ಟೋಬರ್ 1 ರಂದು ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ಮದ್ಯ ನಿಷೇಧ ಅಂದೋಲನದ ಸಂಚಾಲಕಿ ಮೋಕ್ಷಮ್ಮ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕಳೆದ 07 ವರ್ಷಗಳಿಂದ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ ಅನೇಕ ಹಂತದ ಹೋರಾಟಗಳನ್ನು ನಡೆಸಲಾಗಿದೆ. ಹೈಕೋರ್ಟ್‌ ಕೂಡ ಅಕ್ರಮ ಮದ್ಯ ಮಾರಾಟ ತಡೆಯಲು ಸೂಚನೆ ನೀಡಿದೆ. ಆದರೂ ರಾಜ್ಯ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಾರಾಟಕ್ಕೆ ಪರವಾನಗಿ ನೀಡಲು ಮುಂದಾಗಿರುವುದು ಖಂಡನಾರ್ಹವಾಗಿದೆ” ಎಂದರು.

“ಬಡ ಜನರ ಉದ್ದಾರ ಮಾಡುವದಾಗಿ ಅನೇಕ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜನಪರ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರ ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿರುವುದು ಶೋಚನೀಯ. ಮದ್ಯಸೇವೆನೆಯಿಂದ ಈಗಾಗಲೆ ಬಹುತೇಕ ಕುಟುಂಬಗಳು ಬೀದಿಗೆ ಬಂದಿವೆ. ನಿತ್ಯ ನಡೆಯುವ ರಸ್ತೆ ಅಪಘಾತಗಳಿಗೂ ಮದ್ಯಸೇವೆನೆ ಕಾರಣವೆಂದು ಸಮೀಕ್ಷೆ ಹೇಳುತ್ತಿದೆ. ಆದರೆ ಸರ್ಕಾರಕ್ಕೆ ಆದಾಯ ಕಂಡುಕೊಳ್ಳಲು ಮದ್ಯವನ್ನೇ ನಂಬಿಕೊಂಡಿರುವುದು ವಿರ್ಯಾಸವೇ ಸರಿ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಮದ್ಯದ ಹಣದಿಂದ ಸರ್ಕಾರ ನಡೆಸಬಾರದೆಂದು ಹೇಳಿರುವ ಮಹಾತ್ಮಗಾಂಧಿ ಹೇಳಿಕೆಗೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಹಾಗಾಗಿ ಮಹಾತ್ಮಗಾಂಧಿ ಜಯಂತಿಯಂದು ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡುವದಿಲ್ಲ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರಪರಿಹಾರಕ್ಕೆ ಕೃಷಿ ಕೂಲಿಕಾರರ ಸಂಘ ಆಗ್ರಹ

ಮತ್ತೋರ್ವ ಸಂಚಾಲಕಿ ವಿದ್ಯಾಪಾಟೀಲ್ ಮಾತನಾಡಿ, “ಸರ್ಕಾರದ ಸಚಿವರು, ಶಾಸಕರುಗಳಿಗೆ ಮಹಾತ್ಮಗಾಂಧಿ ಪುತ್ಥಳಿಯನ್ನು ಮುಟ್ಟುವ ನೈತಿಕತೆಯಿಲ್ಲ. ಮಹಾತ್ಮಗಾಂಧಿ ಜಯಂತಿಯಂದು ಗಾಂಧಿ ಪ್ರತಿಮೆಗೆ ಹಾರ ಹಾಕದಂತೆ ಪ್ರತಿಭಟನೆ ನಡೆಸುತ್ತೇವೆ. ಸರ್ಕಾರವೇ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಗ್ಯಾರಂಟಿ ಯೋಜನೆ ಕೊಟ್ಟು ಮತ್ತೊಂದಡೆ ಕುಡಿಯಲು ಮದ್ಯದಂಗಡಿಗಳನ್ನು ಸ್ಥಾಪಿಸಲು ಹೊರಟಿರುವುದು ಖಂಡನೀಯ. ಕೂಡಲೇ ಚಿಂತನೆಯನ್ನು ಕೈಬಿಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಯಲಿದೆ” ಎಂದರು.

ಈ ಸಂದರ್ಭದಲ್ಲಿ ಡಾ. ಶಾರದಾ ಹುಲಿನಾಯಕ, ಸುಶೀಲಮ್ಮ ಯಾದಗಿರಿ, ಎಂ ಆರ್ ಭೇರಿ, ರೇಣುಕಾ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X