ಹಾವೇರಿ | ಎಸ್‌ಸಿ/ಎಸ್‌ಟಿ ಸ್ಮಶಾನಕ್ಕೆ ಜಾಗ ಕೊಡಿ; ಮಾದಿಗ ಸಂಘ ಒತ್ತಾಯ

Date:

Advertisements

ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ‌ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರಿಗೆ ರಾಜ್ಯ ಮಾದಿಗ ಸಂಘದ ಪ್ರಚಾರ ಸಮಿತಿ ಅಧ್ಯಕ್ಷ ಉಡಚಪ್ಪ ಮಾಳಗಿ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ನಡೆದ ಜಿಲ್ಲಾ ಜನತಾ ದರ್ಶನದಲ್ಲಿ ಸಂಘದ ಮುಖಂಡರು ಸಚಿವ ಶಿವಾನಂದ ಪಾಟೀಲ್ ಅವರನ್ನು ಭೇಟಿ ಮಾಡಿ ಹಕ್ಕೊತ್ಥಾಯ ಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಉಡಚಪ್ಪ ಮಾಳಗಿ, “ರಾಜ್ಯದಲ್ಲಿ ಗುತ್ತಿಗೆಯಲ್ಲಿಯೇ ಕೆಲಸ ಮಾಡಿಕೊಂಡು ಅತಂತ್ರ ಸ್ಥಿತಿಯಲ್ಲಿರುವ ಬಾಕಿ ಇರುವ ಡ್ರೈವರ್, ಲೋಡರ್,ಕ್ಲೀನರ್ಸ್  ಪೌರಕಾರ್ಮಿರನ್ನು ಪೌರಕಾರ್ಮಿಕರನ್ನು ಖಾಯಂ ಸರಕಾರಿ ಪೌರ ಕಾರ್ಮಿಕ ರೆಂದು ನೇಮಕ‌ ಮಾಡಿಕೊಂಡು ಸೇವಾ ಭದ್ರತೆ ನೀಡಬೇಕು” ಎಂದು ಒತ್ತಾಯಿಸಿದರು.   ‌‌‌

ಹಾವೇರಿ ನಗರದಲ್ಲಿ ಎಸ್.ಸಿ, ಎಸ್.ಟಿ‌ ಜನಾಂಗದವರಿಗೆ, ಈ ವರೆಗೂ ಪ್ರತ್ಯೇಕ ಸ್ಮಶಾನ ಇಲ್ಲದೇ ಅಲ್ಲಿ ಇಲ್ಲಿ ಶವ ಸಂಸ್ಕಾರ ಮಾಡಲಾಗುತ್ತಿದೆ. ಹಾಗಾಗಿ, ಕೂಡಲೇ ನಗರದ ಸೂಕ್ತ ಪ್ರದೇಶದಲ್ಲಿ ಆರು ಎಕರೆ ಜಾಗವನ್ನು ಗುರ್ತಿಸಿ ಸ್ಮಶಾನ ಜಾಗವನ್ನು ಮಂಜೂರು ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಇಂದಿಗೂ ದಲಿತ‌ರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಶೈಕ್ಷಣಿಕ, ಆರ್ಥಿಕ,ಸಾಮಾಜಿಕ ಏಳಿಗೆಗೆ ಸರರ್ಕಾರ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡಬೇಕು ಎಂದು ಆಗ್ರಹ ಮಾಡಿದರು.

Advertisements

ಈ ಸಂದರ್ಭದಲ್ಲಿ ಮಾದಿಗ ಸಮಾಜ ಮುಖಂಡರಾದ ಮಂಜಪ್ಪ ಮರೋಳ, ಹನುಮಂತಪ್ಪ ಹಂಸಿ,ಅಲೆಮಾರಿ  ಸಂಘದ ಮುಖಂಡ ವಿಭೂತಿ ಶೆಟ್ಟಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X