ಮ್ಯಾಕ್ಸ್‌ವೆಲ್‌ ಬೌಲಿಂಗ್‌ ಮೋಡಿಗೆ ಶರಣಾದ ಭಾರತ; 2-1 ಗೆಲುವಿನೊಂದಿಗೆ ಟೀಂ ಇಂಡಿಯಾಗೆ ಸರಣಿ ಕೈವಶ

Date:

Advertisements

ಭಾರತದ ವಿರುದ್ಧದ ಅಂತಿಮ ಹಾಗೂ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಹಾಗೂ ಉತ್ತಮ ಬೌಲಿಂಗ್ ಪ್ರದರ್ಶನದಿಂದಾಗಿ 66 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಈಗಾಗಲೇ ಮೊದಲ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಟೀಂ ಇಂಡಿಯಾ 2-1 ರಿಂದ ಸರಣಿಯನ್ನು ಕೈವಶ ಮಾಡಿಕೊಂಡಿತು.

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯ ನೀಡಿದ್ದ 353 ರನ್‌ಗಳ ಭರ್ಜರಿ ಸವಾಲನ್ನು ಬೆನ್ನಟ್ಟಿದ್ದ ರೋಹಿತ್ ಶರ್ಮಾ ನೇತೃತ್ವದ ಭಾರತದ ಪಡೆ 49.4ಓವರ್‌ಗಳಲ್ಲಿ 286 ರನ್‌ಗಳಿಗೆ ಆಲೌಟ್ ಆಯಿತು. 

ಆಸಿಸ್ ಪರ ಆಲ್‌ರೌಂಡರ್‌ ಗ್ಲೆನ್ ಮ್ಯಾಕ್ಸ್‌ವೆಲ್ 40/4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಮೂಲಕ ಆಸ್ಟ್ರೇಲಿಯ ಎರಡು ಪಂದ್ಯಗಳ ಸೋಲಿನ ಸೇಡನ್ನು ತೀರಿಸಿಕೊಂಡರು.

Advertisements

57 ಎಸೆತಗಳಲ್ಲಿ 6 ಭರ್ಜರಿ ಸಿಕ್ಸರ್ 5 ಬೌಂಡರಿಯೊಂದಿಗೆ 81 ರನ್, ವಿರಾಟ್ ಕೊಹ್ಲಿ 56, ಶ್ರೇಯಸ್ ಅಯ್ಯರ್ 48 ಪ್ರತಿರೋಧ ತೋರಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಸಫಲರಾಗಲಿಲ್ಲ.  ಕೊನೆಯವರೆಗೂ ಆಟವಾಡಿದ ಆಲ್‌ರೌಂಡರ್‌ ಜಡೇಜಾ 35 ರನ್‌ ಗಳಿಸಿ ಔಟಾದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಅದ್ಭುತ ಪ್ರದರ್ಶನ ತೋರಿ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ಗಳ ಬೃಹತ್ ಮೊತ್ತ ಕಲೆ ಹಾಕಿತು.

ಈ ಸುದ್ದಿ ಓದಿದ್ದೀರಾ? ಶುಭ್‌ಮನ್‌ ಗಿಲ್‌ – ಋತುರಾಜ್‌ ಆಕರ್ಷಕ ಅರ್ಧ ಶತಕ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಜಯ

ಬ್ಯಾಟಿಂಗ್ ಪಿಚ್‌ನಲ್ಲಿ ಅಕ್ಷರಶಃ ರನ್ ಮಳೆಯನ್ನೇ ಹರಿಸಿದ ಆಸೀಸ್‌ನ ನಾಲ್ವರು ಆಟಗಾರರು ಬಿರುಸಿನ ಅರ್ಧಶತಕ ಸಿಡಿಸಿ ಮಿಂಚಿದರು. ನಾಯಕ ಪ್ಯಾಟ್ ಕಮಿನ್ಸ್ ನಿರ್ಧಾರ ಸಮರ್ಥಿಸುವಂತೆ ಬ್ಯಾಟಿಂಗ್ ನಡೆಸಿದ ಡೇವಿಡ್ ವಾರ್ನರ್ – ಮಿಚೆಲ್ ಮಾರ್ಷ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಮೊದಲ ವಿಕೆಟ್‌ಗೆ 78 ರನ್ ಜೊತೆಯಾಟವಾಡಿದರು.

ಇನ್ನಿಂಗ್ಸ್ ಆರಂಭದ ಮೊದಲ ಎಸೆತದಿಂದಲೇ ಸ್ಫೋಟಕ ಆಟವಾಡಿದ ಡೇವಿಡ್ ವಾರ್ನರ್, ಈ ಸರಣಿಯಲ್ಲಿ ಸತತ 3ನೇ ಅರ್ಧಶತಕ ಸಿಡಿಸಿದರು. 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವಾರ್ನರ್, 56 ರನ್ ಗಳಿಸಿದ್ದಾಗ ಪ್ರಸಿದ್ಧ್ ಕೃಷ್ಣ ಬೌಲಿಂಗ್‌ನಲ್ಲಿ ಕೀಪರ್ ರಾಹುಲ್‌ಗೆ ಕ್ಯಾಚ್ ನೀಡಿ ಹೊರನಡೆದರು. ಮೊದಲ ವಿಕೆಟ್ ನಷ್ಟವಾದರೂ ಆರ್ಭಟ ನಿಲ್ಲಿಸದ ಮಿಚೆಲ್ ಮಾರ್ಷ್ ಸ್ಟೀವ್ ಸ್ಮಿತ್ ಜೊತೆಗೂಡಿ 3ನೇ ವಿಕೆಟ್‌ಗೆ 137 ರನ್ ಬಾರಿಸಿದರು.

ವಾರ್ನರ್ ಔಟಾದ ಬಳಿಕವೂ ಒಂದೇ ಸಮನೆ ಬ್ಯಾಟ್‌ ಬೀಸಿದ ಮಿಚೆಲ್ ಮಾರ್ಷ್, ಶತಕದ ಗಡಿಯಲ್ಲಿ ವಿಕೆಟ್ ಒಪ್ಪಿಸಿದರು. 84 ಎಸೆತಗಳಲ್ಲಿ 13 ಬೌಂಡರಿ, 3 ಸಿಕ್ಸರ್ ಸಹಿತ 96 ರನ್ ಗಳಿಸಿ 4 ರನ್‌ಗಳಿಂದ ಶತಕ ವಂಚಿತರಾಗಿ ಕುಲ್ದೀಪ್ ಯಾದವ್‌ಗೆ ಔಟಾದರು. ಮತ್ತೊಂದೆಡೆ ಸ್ಮಿತ್ ಕೂಡ ಜವಾಬ್ದಾರಿಯುತ ಆಟದ ಜೊತೆಗೆ ಅಮೋಘ ಇನ್ನಿಂಗ್ಸ್ ಕಟ್ಟಿದರು. 61 ಎಸೆತಗಳಲ್ಲಿ 9 ಬೌಂಡರಿ ಸಹಿತ 72 ರನ್ ಚಚ್ಚಿದ ಸ್ಮಿತ್ ಸಿರಾಜ್ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು.

4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಬುಶೇನ್ ಆರಂಭದಲ್ಲಿ ರಕ್ಷಣಾತ್ಮಕ ಆಟವಾಡಿದರು. ಪಂದ್ಯ ಮುಂದುವರೆದಂತೆ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿ ಕೊನೆಯವರೆಗೂ ಆಟವಾಡಿ 48.6 ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಕುಲ್ದೀಪ್ ಯಾದವ್ 2, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X