ಜಾತಿ ದೌರ್ಜನ್ಯ | ಅಂತರ್ಜಾತಿ ವಿವಾಹವಾಗಿದ್ದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

Date:

Advertisements

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ ಪರಸ್ಪರ ಪ್ರೀತಿಸಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮಣಿಕಂಡ ರೆಡ್ಡಿ ಸಮುದಾಯ ಮತ್ತು ಸಾವಿತ್ರಮ್ಮ ಜೋಗಿ ಸಮುದಾಯಕ್ಕೆ ಸೇರಿದ್ದವರಾಗಿದ್ದು, ಇಬ್ಬರೂ ಬೆಂಗಳೂರಿನಲ್ಲಿ ನೆಲೆಸಿದ್ದರು. ದಂಪತಿಗೆ ಇತ್ತೀಚೆಗೆ ಮಗು ಜನಿಸಿತ್ತು. ಹೀಗಾಗಿ, ಸಾವಿತ್ರಮ್ಮ ಅವರ ತವರು ಮನೆಗೆ ದಂಪತಿಗಳು ತೆರಳಿದ್ದಾರೆ. ಈ ವೇಳೆ, ಸಾವಿತ್ರಮ್ಮ ಬಾಣಂತಿ ಎಂಬುದನ್ನೂ ಲೆಕ್ಕಿಸದೇ ಗ್ರಾಮಸ್ಥರು ಅವರಿಗೆ ಊರಿನಿಂದ ಬಹಿಷ್ಕಾರ ಹಾಕಿದ್ದಾರೆ.

ದಂಪತಿಗಳಿಬ್ಬರಿಗೂ ಹುಟ್ಟಿನಿಂದಲೇ ಶ್ರವಣ ಮತ್ತು ವಾಕ್‌ ದೋಷವಿದೆ ಎಂದು ಹೇಳಲಾಗಿದೆ. ಈ ಹಿಂದೆ, ಮದುವೆಯಾದ ಸಮಯದಲ್ಲಿಯೂ ದಂಪತಿಗಳು ಊರಿಗೆ ತೆರಳಿದ್ದರು. ಆ ವೇಳೆಯೂ ಇಬ್ಬರನ್ನು ಊರಿನಿಂದ ಹೊರಗಟ್ಟಿದ್ದ ಗ್ರಾಮಸ್ಥರು, ಯುವತಿಯ ಪಾಲಕರಿಗೆ 30,000 ರೂ. ದಂಡ ಹಾಕಿದ್ದಾರೆ ಎಂದು ವರದಿಯಾಗಿದೆ.

Advertisements

ಇದೀಗ, ಸಾವಿತ್ರಮ್ಮ ಬಾಣಂತಿಯಾದ್ದರಿಂದ ಮತ್ತೆ ತವರಿಗೆ ತೆರಳಿದ್ದರು. ವಿಷಯ ತಿಳಿದ ಜೋಗಿ ಜನಾಂಗದ ಮುಖಂಡರು ಮತ್ತೆ ಆಕೆಯ ಪಾಲಕರನ್ನು ಕರೆಸಿ ಗಲಾಟೆ ಮಾಡಿದ್ದಾರೆ. ಸಾವಿತ್ರಮ್ಮ ದಂಪತಿಗಳನ್ನು ಊರಿನಿಂದ ಹೊರ ಕಳಿಸದಿದ್ದರೆ,ಪಾಲಕರಿಗೂ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಜಾತಿಗ್ರಸ್ತ ಗ್ರಾಮಸ್ಥರ ದಬ್ಬಾಳಿಕೆಯಿಂದ ನೊಂದ ಸಾವಿತ್ರಮ್ಮ ಮತ್ತು ಮಣಿಕಂಠ ಚಳ್ಳಕೆರೆ ಮೂಗ ಮತ್ತು ಕಿವುಡರ ಶಾಲೆ ತೆರಳಿ ಅಲ್ಲಿನ ಸಿಬ್ಬಂದಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಅಲ್ಲಿನ ಶಿಕ್ಷಕರು ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದಯ್ದಿದ್ದಾರೆ. ಬಳಿಕ, ಸ್ಥಳಕ್ಕೆ ತೆರಳಿದ ತಹಶೀಲ್ದಾರ್ ರಹಾನ್ ಪಾಷ ಅವರು ದಂಪತಿಗೆ ಧೈರ್ಯ ಹೇಳಿದ್ದಾರೆ. ಜಾತಿಗ್ರಸ್ತರ ಗ್ರಾಮದ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X