- ಮಧ್ಯಪ್ರದೇಶದ ಉಜ್ಜಯಿನಿ ನಗರದ ಬೀದಿಯಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ
- ‘ಲಾಡ್ಲಿ ಬೆಹನಾ’ ಹೆಸರಿನಲ್ಲಿ ಚುನಾವಣಾ ಘೋಷಣೆ ಮಾಡಿ ಏನು ಪ್ರಯೋಜನ
ಮಧ್ಯಪ್ರದೇಶದ ಉಜ್ಜಯಿನಿಯ ಬೀದಿಯಲ್ಲಿ 12 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರಕರಣದಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ.
ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಬಿಜೆಪಿಯ ದುರಾಡಳಿತದಲ್ಲಿ ಬಾಲಕಿಯರು, ಮಹಿಳೆಯರು ಮತ್ತು ದಲಿತರು, ಆದಿವಾಸಿಗಳು ಸುರಕ್ಷಿತರಲ್ಲ” ಎಂದು ಟ್ವೀಟ್ ಮೂಲಕ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
भगवान महाकाल की नगरी उज्जैन में एक छोटी बच्ची के साथ हुई बर्बरता आत्मा को झकझोर देने वाली है। अत्याचार के बाद वह ढाई घंटे तक दर-दर मदद के लिए भटकती रही और फिर बेहोश होकर सड़क पर गिर गई लेकिन मदद नहीं मिल सकी।
— Priyanka Gandhi Vadra (@priyankagandhi) September 28, 2023
ये है मध्य प्रदेश की कानून व्यवस्था और महिला सुरक्षा? भाजपा के 20 साल…
ಟ್ವೀಟ್ನಲ್ಲಿ, “ಭಗವಂತ ಮಹಾಕಾಳನ ನಗರವಾಗಿರುವ ಉಜ್ಜಯಿನಿಯಲ್ಲಿ ಪುಟ್ಟ ಬಾಲಕಿಯ ಮೇಲೆ ನಡೆದ ಕ್ರೌರ್ಯವು ಆತ್ಮವನ್ನು ಛಿದ್ರಗೊಳಿಸುವಂತದ್ದಾಗಿದೆ. ಚಿತ್ರಹಿಂಸೆ ತಾಳಲಾಗದೆ ಬಾಲಕಿ ಸಹಾಯಕ್ಕಾಗಿ ಮನೆಯಿಂದ ಮನೆಗೆ ಎರಡೂವರೆ ಗಂಟೆ ಅಲೆದಾಡಿದ್ದಾಳೆ. ಬಳಿಕ, ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದರೂ ಯಾವುದೇ ಸಹಾಯ ಸಿಕ್ಕಿರಲಿಲ್ಲ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಬೇಸರಿಸಿದ್ದಾರೆ.
The injured girl, the #Ujjain Madhya Pradesh rape victim, who walked for more than 8 KM and two hours, was finally rushed to help Hospital by an ashram priest.#ModijiSaveAriha #MumbaiRains #3rdODI #AskSRK #TeJran #LeoTrailer #ISKCON #VD13 #WorldTourismDay #SteveSmith pic.twitter.com/NWeBxnZHRB
— KAJAL SHARMA 💃 💯 Follow Back (@KAJAL182SHARMA) September 27, 2023
“ಇದು ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯೇ? ಬಿಜೆಪಿಯ 20 ವರ್ಷಗಳ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರಿಗೆ ರಕ್ಷಣೆ ಸಿಕ್ಕಿಲ್ಲ” ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದ್ದಾರೆ.
“ಹೆಣ್ಣುಮಕ್ಕಳಿಗೆ ರಕ್ಷಣೆ, ಸಹಾಯ ಸಿಗದಿದ್ದಾಗ ‘ಲಾಡ್ಲಿ ಬೆಹನಾ’ ಹೆಸರಿನಲ್ಲಿ ಚುನಾವಣಾ ಘೋಷಣೆ ಮಾಡಿ ಏನು ಪ್ರಯೋಜನ?” ಎಂದು ಪ್ರಿಯಾಂಕಾ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"I Gave Her Clothes, Called Cops": Madhya Pradesh Priest Who Helped Rape Survivor
— NDTV (@ndtv) September 28, 2023
Read here➡️https://t.co/S1BVq3cxpq pic.twitter.com/JAs2YHXLYV
ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ರಕ್ತಸ್ರಾವದಿಂದ ನರಳುತ್ತಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ಬುಧವಾರ ನಡೆದಿದೆ. ಬಾಲಕಿಯ ಸ್ಥಿತಿಯನ್ನು ಕಂಡ ದೇವಸ್ಥಾನದ ಅರ್ಚಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿ, ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ತಜ್ಞ ವೈದ್ಯರ ತಂಡವು ಶಸ್ತ್ರಚಿಕಿತ್ಸೆಗೆ ಒಳಪಡಿಸಿದೆ. ಆದರೂ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅತ್ಯಾಚಾರಕ್ಕೊಳಗಾದ ಬಳಿಕ ಬಾಲಕಿ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ಅತ್ಯಂತ ದುರದೃಷ್ಟಕರ ಸಂಗತಿ ಏನೆಂದರೆ, ಬಾಲಕಿಯ ಪರಿಸ್ಥಿತಿ ನೋಡಿಯೂ ಯಾರೂ ಕೂಡ ಸಹಾಯ ಮಾಡಲು ಮುಂದಾಗಿಲ್ಲ ಎಂಬುದು. ಈ ಎಲ್ಲ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.
All indians responsible for this kind of inhuman, merciless, shameless, irresponsible, sinful crimes taking place in their presence, God forbade punishment on us.