ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

Date:

Advertisements
  • 2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ
  • ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ

2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.

ಗುರುವಾರ ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ 150ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಬಳಗದ ವತಿಯಿಂದ ಮನವಿ ಮಾಡಿದ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಕೆಎಟಿಯಿಂದ ತೀರ್ಪು ಪ್ರಕಟವಾಗಿದೆ. ಸರ್ಕಾರದ ಸುತ್ತೋಲೆಯ ಪರವಾಗಿ ಜಯವಾಗಿದೆ. ತೀರ್ಪನ್ನು ಸ್ವಾಗತಿಸುತ್ತೇನೆ. ಇನ್ನು ಸಿಸಿಬಿ ವರದಿಯ ಪರಿಶೀಲನೆಗಾಗಿ ನೇಮಿಸಿದ ತ್ರಿಸದಸ್ಯ ಸಮಿತಿಯಿಂದ 6 ದಿನಗಳ ಒಳಗೆ ವರದಿಯನ್ನು ಪಡೆದು, ಕೂಡಲೇ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಅಭ್ಯರ್ಥಿಗಳು ಆತಂಕ ಪಡಬೇಡಿ” ಎಂದರು.

Advertisements

“ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಕುರಿತಾಗಿ ಮಾನ್ಯ ಕರ್ನಾಟಕ ಆಡಳಿತ ನ್ಯಾಯಾಧಿಕರಣವು 01-02-2023ರ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತ ಕರ್ನಾಟಕ ಸರ್ಕಾರದ ಮಧ್ಯಂತರ ಸುತ್ತೋಲೆಯನ್ನು ಎತ್ತಿ ಹಿಡಿದು ಸದರಿ ನೇಮಕಾತಿಯ ವ್ಯಾಜ್ಯವನ್ನು ಬಗೆಹರಿಸಿ ತೀರ್ಪು ಪ್ರಕಟಿಸಿದೆ. ನೇಮಕಾತಿಗೆ ಮುಂದೆ ಯಾವುದೇ ಕಾನೂನಾತ್ಮಕ ತೊಡಕುಗಳು ಎದುರಾಗದಂತೆ ದಯವಿಟ್ಟು ಸರ್ಕಾರದ ಕಡೆಯಿಂದಲೇ ಗೌರವಾನ್ವಿತ ಉಚ್ಚ ನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಬೇಕೆಂದು” ಅಭ್ಯರ್ಥಿಗಳು ಆಗ್ರಹಿಸಿದರು. ಸಚಿವರು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ನಾಳೆಯೇ ಕೇವಿಯಟ್ ಸಲ್ಲಿಸಬೇಕೆಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

“ಈಗಾಗಲೇ ನೇಮಕಾತಿ ಆರಂಭವಾಗಿ 3 ವರ್ಷಗಳು ಮುಗಿಯುತ್ತಿದ್ದು, ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಖಾಯಂ ಪ್ರಾಧ್ಯಾಪಕರ ನೇಮಕಾತಿ ಅತ್ಯಂತ ಜರೂರಾಗಬೇಕಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿರುವಂತಹ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳೆಲ್ಲರೂ ಈಗಾಗಲೇ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ. ನೇಮಕಾತಿ ಯಾವಾಗ ಆರಂಭವಾಗಿ, ನೇಮಕಾತಿ ಆದೇಶವನ್ನು ಯಾವಾಗ ಪಡೆಯುತ್ತೇವೆ ಎಂಬ ಚಿಂತೆಯಲ್ಲೇ ದಿನದೂಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಇತ್ತ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಲು ಖಾಯಂ ಪ್ರಾಧ್ಯಾಪಕರಿಲ್ಲದಂತಾಗಿದೆ. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವ ಇಚ್ಛಾಶಕ್ತಿಯನ್ನು ಸರ್ಕಾರ ಮಾಡಬೇಕಿದೆ. ಆಯ್ಕೆಯಾದ ಎಲ್ಲ ಸಹಾಯಕ ಪ್ರಾಧ್ಯಾಪಕರಿಗೆ ಉದ್ಯೋಗ ನೀಡುವ ಮೂಲಕ ನಿರುದ್ಯೋಗವನ್ನು ಹೋಗಲಾಡಿಸಬೇಕು. ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನೆರವಾಗಬೇಕಿದೆ” ಎಂದು ಅಭ್ಯರ್ಥಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಳದ ನಾಗಲಕ್ಷ್ಮೀ, ಪ್ರಿಯಾಂಕ, ಜಯಶಂಕರ್, ರಮೇಶ್, ಅಶೋಕ್, ಯದುಕುಮಾರ್, ಯಲ್ಲಪ್ಪ, ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X