ಧಾರವಾಡ | ಪೌರಕಾರ್ಮಿಕರಿಗೆ ‘ಭೀಮಾಶ್ರಯ’ ವಿಶ್ರಾಂತಿ ಕೊಠಡಿ ಆರಂಭ

Date:

Advertisements

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಪೌರಕಾರ್ಮಿಕರಿಗಾಗಿ ‘ಭೀಮಾಶ್ರಯ’ ವಿಶ್ರಾಂತಿ ಕೊಠಡಿಗಳನ್ನು ಪ್ರಾರಂಭಿಸಿದ್ದು, ಪೌರಕಾರ್ಮಿಕರು ಕೆಲಸದ ಸಮಯದಲ್ಲಿ ಇದನ್ನು ಬಳಸಬಹುದು. ಈ ವಿಶ್ರಾಂತಿ ಕೊಠಡಿಗಳಲ್ಲಿ ಶೌಚಾಲಯಗಳು, ಕುಡಿಯುವ ನೀರು, ವಿಶ್ರಾಂತಿ ಕೇಂದ್ರಗಳು ಸೇರಿದಂತೆ ಇತರ ಸೌಲಭ್ಯಗಳನ್ನು ಅಳವಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೆಪ್ಟೆಂಬರ್ 23 ರಂದು ‘ಪೌರ ಕಾರ್ಮಿಕರ ದಿನಾಚರಣೆ’ ಆಚರಿಸಿದ ಸಂದರ್ಭದಲ್ಲಿ ವಿಶ್ರಾಂತಿ ಕೊಠಡಿಗಳಿಗೆ ಚಾಲನೆ ನೀಡಿದೆ.

ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಗಳ ಕಲ್ಪನೆಯನ್ನು ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಪರಿಚಯಿಸಲಾಯಿತು. ಆ ಯೋಜನೆಯನ್ನು ಅನುಸರಿಸಿ, ಎಚ್‌ಡಿಎಂಸಿ ಈಗ ಇದನ್ನು ಪ್ರಾಯೋಗಿಕ ಯೋಜನೆಯಾಗಿ ಜಾರಿಗೆ ತಂದಿದೆ. ನಾಗರಿಕ ಸಂಸ್ಥೆಯ ವ್ಯಾಪ್ತಿಯಲ್ಲಿ 24 ಕಂಟೇನರ್ ಮಾದರಿಯ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಅವಳಿ ನಗರಗಳಿಗೆ 5 ತಿಂಗಳಲ್ಲಿ 100 ಹೊಸ ಸಿಟಿ ಬಸ್‌ಗಳು ರಸ್ತೆಗಿಳಿಯಲಿವೆ: ಸಾರಿಗೆ ಸಚಿವ

ಪೌರಕಾರ್ಮಿಕರು ನೆಲದ ಮೇಲೆ ಅಥವಾ ಬಯಲಿನಲ್ಲಿ ಕುಳಿತು ಊಟ ಮಾಡುವುದು ನಗರಾದ್ಯಂತ ಸಾಮಾನ್ಯ ದೃಶ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ 10 ವರ್ಷಗಳಿಂದ ಶೌಚಾಲಯಕ್ಕೆ ಬೇಡಿಕೆ ಇಟ್ಟಿದ್ದರು. ಈಗ, ಕಾರ್ಮಿಕರು ಅಂತಿಮವಾಗಿ ಈ ವಿಶ್ರಾಂತಿ ಕೊಠಡಿಗಳಿಂದ ಅಪಾರ ಪ್ರಯೋಜನ ಪಡೆಯಬಹುದು ಎಂಬುದು ಸಾರ್ವಜನಿಕರ ಅಭಿಪ್ರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್‌ಮೆಂಟ್‌ ಟ್ರಸ್ಟ್‌ನ ವಾರ್ಷಿಕೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 22ರ ಶುಕ್ರವಾರದಂದು ಅಮ್ಮ ಎಜುಕೇಷನಲ್...

ತುಮಕೂರು | ಅಲೆಮಾರಿಗಳನ್ನು ಬೀದಿ ಪಾಲು ಮಾಡಿದ ಕಾಂಗ್ರೆಸ್ ಸರ್ಕಾರ : ಎ. ನರಸಿಂಹಮೂರ್ತಿ

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಶೇ....

ಉತ್ತರ ಕನ್ನಡ | ಕೇಣಿ ಬಂದರು ಅಹವಾಲು ಸ್ವೀಕಾರ ಸಭೆ: ಹಣದ ಆಮಿಷವೊಡ್ಡಿ ಬೆಂಬಲ ಪಡೆಯುತ್ತಿರುವ ಆರೋಪ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಉದ್ದೇಶಿತ ಖಾಸಗಿ ಬಂದರು...

ಹಾಸನ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಹಾಸನ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2024-25...

Download Eedina App Android / iOS

X