ದೆಹಲಿಯ ಬಡಗಿಗಳೊಂದಿಗೆ ಬೆರೆತು ಕೆಲಸ ಮಾಡಿ, ಕಷ್ಟಸುಖ ವಿಚಾರಿಸಿದ ರಾಹುಲ್ ಗಾಂಧಿ

Date:

Advertisements

ಭಾರತ್ ಜೋಡೊ ಯಾತ್ರೆಯ ಯಶಸ್ಸಿನ ಬಳಿಕ ಕಳೆದ ಕೆಲವು ಸಮಯದಿಂದ ನಿರಂತರವಾಗಿ ಸಾಮಾನ್ಯ ಜನರನ್ನು ಭೇಟಿಯಾಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು ದೆಹಲಿಯ ಬಡಗಿಗಳನ್ನು ಭೇಟಿಯಾಗಿ ಅವರ ಕಷ್ಟಸುಖಗಳನ್ನು ವಿಚಾರಿಸಿ, ಅವರೊಂದಿಗೆ ಕೆಲಸ ಮಾಡುವ ಮೂಲಕ ಕೆಲ ಸಮಯ ಕಳೆದರು.

ದೆಹಲಿಯ ಕೀರ್ತಿನಗರದಲ್ಲಿರುವ ಏಷ್ಯಾದ ಅತಿದೊಡ್ಡ ಪೀಠೋಪಕರಣ ಮಾರುಕಟ್ಟೆಗೆ ತೆರಳಿದ ಅವರು, ಬಡಗಿಗಳು ಕಠಿಣ ಕೆಲಸಗಾರರು. ಅದರ ಜೊತೆಗೆ ಅದ್ಭುತ ಕಲಾವಿದರು ಎಂದು ಮೆಚ್ಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಇಂದು ನಾನು ದೆಹಲಿಯ ಕೀರ್ತಿನಗರದಲ್ಲಿರುವ ಏಷ್ಯಾದ ಅತಿದೊಡ್ಡ ಪೀಠೋಪಕರಣ ಮಾರುಕಟ್ಟೆಗೆ ಹೋಗಿ ಬಡಗಿ ವೃತ್ತಿ ಮಾಡುತ್ತಿರುವ ಸಹೋದರರನ್ನು ಭೇಟಿಯಾದೆ. ಅವರು ಕಠಿಣ ಕೆಲಸಗಾರರು. ಅಲ್ಲದೆ, ಅವರು ಅದ್ಭುತ ಕಲಾವಿದರೂ ಆಗಿದ್ದಾರೆ. ಶಕ್ತಿ ಮತ್ತು ಸೌಂದರ್ಯವನ್ನು ಕೆತ್ತುವಲ್ಲಿ ಪರಿಣಿತರು. ನಾವು ತುಂಬಾ ಮಾತನಾಡಿಕೊಂಡೆವು. ಅವರ ಕೌಶಲ್ಯಗಳ ಬಗ್ಗೆ ತಿಳಿದುಕೊಂಡು ಮತ್ತು ಸ್ವಲ್ಪ ಕಲಿಯಲು ಪ್ರಯತ್ನಿಸಿದೆ” ಎಂದು ತಿಳಿಸಿದ್ದಾರೆ.

Advertisements

ದೇಶದಿಂದ ದ್ವೇಷ ನಿರ್ಮೂಲನೆಯಾಗಿ ಭಾರತ ಒಗ್ಗಟ್ಟಾಗುವವರೆಗೆ ಭಾರತ್ ಜೋಡೋ ಯಾತ್ರೆಯನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕನ್ಯಾಕುಮಾರಿಯಿಂದ ಕಾಶ್ಮೀರವರೆಗಿನ ಭಾರತ್ ಜೋಡೋಗೆ ಸೆ.7ರಂದು ಒಂದು ವರ್ಷವಾದ ವೇಳೆ ಘೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X