ಕರ್ನಾಟಕ ಬಂದ್‌ | ಮೈಸೂರು ಸ್ತಬ್ಧ; ಕಬಿನಿ ಡ್ಯಾಂ ಬಳಿ ನಿಷೇಧಾಜ್ಞೆ ಜಾರಿ

Date:

Advertisements

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆಕೊಡಲಾಗಿದೆ. ಬಂದ್‌ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೈಸೂರು ನಗರ ಅಕ್ಷರಶಃ ಸ್ತಬ್ಧವಾಗಿದೆ.

ಮೈಸೂರಿನಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌, ಖಾಸಗಿ ಬಸ್‌, ಆಟೋಗಳು ಸೇರಿದಂತೆ ವಾಹನಗಳು ರಸ್ತೆಗಿಳಿದಿಲ್ಲ.

ಮೈಸೂರಿನ ರಸ್ತೆಗಳು ಖಾಲಿ-ಖಾಲಿ ಹೊಡೆಯುತ್ತಿವೆ. ಕನ್ನಡಪರ-ರೈತಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳು ಮತ್ತು ಸ್ಥಳಗಳಲ್ಲಿ ಪೊಲೀಸರು ಮತ್ತು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

Advertisements

ಬಸ್‌ ಸಂಚಾರ ಸ್ಥಗಿತಗೊಂಡಿರುವ ಮಾಹಿತಿ ದೊರೆಯದೆ ಹಲವರು ಪ್ರಯಾಣಿಕರು ಬಸ್‌ ನಿಲ್ಧಾಣಗಳಿಗೆ ಬಂದಿದ್ದು, ಬಸ್‌ಗಳಿಲ್ಲದೆ ಪರದಾಡಿದ್ದಾರೆ.

ಬಸ್‌ ನಿಲ್ಧಾಣಕ್ಕೆ ಬಂದಿದ್ದ ಮೈಸೂರು ನಿವಾಸಿ ಗಾಯತ್ರಿ ಈದಿನ.ಕಾಮ್ ಜೊತೆ ಮಾತನಾಡಿ, “ಬಂದ್‌ಗೆ ಸಾರಿಗೆ ಸಂಸ್ಥೆ ಬೆಂಬಲ ನೀಡಿಲ್ಲ. ಬಸ್‌ಗಳು ಕಾರ್ಯಾಚರಣೆ ನಡೆಸುತ್ತವೆ ಎಂಬ ಮಾಹಿತಿ ಇತ್ತು. ಹೀಗಾಗಿ, ಚನ್ನರಾಯಪಟ್ಟಣಕ್ಕೆ ತೆರಳಲು ಬಸ್‌ ನಿಲ್ದಾಣಕ್ಕೆ ಬಂದೆ. ಇಲ್ಲಿ ನೋಡಿದರೆ ಬಸ್‌ಗಳೇ ಇಲ್ಲ. ಸಾರಿಗೆ ಸಂಸ್ಥೆ ಸರಿಯಾಗಿ ಮಾಹಿತಿ ನೀಡಿಲ್ಲ. ಇಂತಹ ಸಂದರ್ಭಗಳಲ್ಲಿ ಸಂಸ್ಥೆಯು ಜವಬ್ದಾರಿಯಿಂದ ನಡೆದುಕೊಳ್ಳಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬಂದ್ – ಪ್ರತಿಭಟನೆಯ ತೀವ್ರತೆ ಕಡಿಮೆಯಾದ ನಂತರ ಬಸ್‌ ಸಂಚಾರ ಆರಂಭಿಸುತ್ತೇವೆ. ಈದ ಎಲ್ಲ ಬಸ್‌ಗಳನ್ನು ಡಿಪೊಗೆ ಕಳುಹಿಸಲಾಗಿದೆ” ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹೇಳಿದ್ದಾರೆ.

ಈ ಮಧ್ಯೆ, ಜಿಲ್ಲಯಲ್ಲಿರುವ ಕಬಿನಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸದಸ್ಯರು ಸಿದ್ದತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜಲಾಶಯದ ಸುತ್ತಮುತ್ತ ಶುಕ್ರವಾರ ಸಂಜೆ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X