ಕರ್ನಾಟಕ ಬಂದ್ | ಚಾಮರಾಜನಗರ – ರಾಮನಗರದಲ್ಲಿ ಉತ್ತಮ ಪ್ರತಿಕ್ರಿಯೆ

Date:

Advertisements

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್‌ ಆಗಿದ್ದು, ಎರಡೂ ನಗರಗಳು ಸ್ತಬ್ದಗೊಂಡಿವೆ.

ಚಾಮರಾಜನಗರದಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದಾರೆ. ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ, ಖಾಸಗಿ ಬಸ್‌, ಆಟೋಗಳು ರಸ್ತೆಗಿಳಿದಿಲ್ಲ. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ರಾಮನಗರದಲ್ಲಿಯೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ನಗರದಲ್ಲಿ ಅಂಗಡಿಗಳಲ್ಲೆವೂ ಬಂದ್‌ ಆಗಿದ್ದು, ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನೂ ಪ್ರತಿಭಟನಾಕಾರರ ಮುಚ್ಚಿಸಿದ್ದಾರೆ. ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.

Advertisements

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಎಮ್ಮೆಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ. ಭಾವಚಿತ್ರಗಳನ್ನು ಕಸಿದುಕೊಂಡ ಪೊಲೀಸರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X