ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

Date:

Advertisements

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದನ್ನು ನಟ ಶಿವರಾಜ್‌ಕುಮಾರ್ ಖಂಡಿಸಿದ್ದಾರೆ. ಘಟನೆ ಸಂಬಂಧ ನಟ ಸಿದ್ಧಾರ್ಥ್‌ ಬಳಿ ಕ್ಷಮೆ ಕೇಳಿದ್ದಾರೆ.

ಕರ್ನಾಟಕ ಬಂದ್‌ ಹಿನ್ನೆಲೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಿವರಾಜ್‌ಕುಮಾರ್ ಭಾಗವಹಿಸಿ ಮಾತನಾಡಿದರು. “ಕಾವೇರಿ ಸಮಸ್ಯೆ ಈ ಹಿಂದೆ ಇಂದಲೂ ಇದೆ. ಇದಕ್ಕೆ ಒಬ್ಬರು ಮತ್ತೊಬ್ಬರನ್ನು ದೂರುವುದರಿಂದ ಪರಿಹಾರ ಸಿಗುವುದಿಲ್ಲ. ಎರಡೂ ರಾಜ್ಯದವರೂ ಕೂತು ಸಮಸ್ಯೆ ಬಗೆಹರಿಸಲು ಮಾರ್ಗಗಳನ್ನು ರೂಪಿಸಬೇಕು. ಶಾಸ್ವತ ಪರಿಹಾರ ಕಂಡುಕೊಳ್ಳಬೇಕು” ಎಂದರು.

“ಕಾವೇರಿ ತಾಯಿಗೂ ನೋವಾಗಿದೆ. ಆಕೆ ಇಲ್ಲಿಯೂ ಇರಬೇಕು, ಅಲ್ಲಿಯೂ ಹೋಗಬೇಕು. ನೀರಿಲ್ಲ ಅಂದ್ರೆ ಅಳಬೇಕು” ಎಂದರು.

Advertisements

“ಸಮಸ್ಯೆ ಅಂತ ಬಂದಾಗ ಕಲಾವಿದರು ಬರಲ್ಲ ಅಂತೀರಿ. ಸಿನಿಮಾದವರು ಬಂದು 5 ನಿಮಿಷ ಮಾತಾಡಿದ್ರೆ ಸಮಸ್ಯೆ ಬಗೆಹರಿಯುತ್ತಾ? ನಾವು ಮನುಷ್ಯರು. ಪ್ರತಿಭಟನೆಗೆ ಒಬ್ಬ ಕಲಾವಿದ ಭಾಗವಹಿಸಿದರೂ, ಇಡೀ ಚಿತ್ರರಂಗವೇ ಭಾಗವಹಿಸಿದಂತೆ ನಾವೆಲ್ಲರೂ ಒಂದೇ. ಅವರು ಬಂದಿಲ್ಲ. ಇವರು ಬಂದಿಲ್ಲ ಅಂತ ದೂರುವುದು ಸರಿಯಲ್ಲ” ಎಂದರು.

“ಬೇರೆ ಭಾಷೆಯ ನಟರು ಸುದ್ದಿಗೋಷ್ಠಿ ನಡೆಸುವಾಗ ಯಾರು ನಿಲ್ಲಿಸಿದ್ದಾರೆ ಅಂತ ಗೊತ್ತಿಲ್ಲ. ಆದರೆ ಆ ರೀತಿ ಮಾಡಿರೋದು ತಪ್ಪು. ಸಮಸ್ಯೆಯನ್ನು ನಾವು ಎದುರಿಸಬೇಕು. ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಸಿದ್ದಾರ್ಥ್ ಅವರಿಗೆ ನಮ್ಮಿಂದ ಬೇಸರ ಆಗಿದೆ. ಕನ್ನಡ ಚಿತ್ರರಂಗದ ಪರವಾಗಿ ಅವರಿಗೆ ನಾವು ಕ್ಷಮೆ ಕೇಳುತ್ತೇವೆ. ಈ ಘಟನೆಯಿಂದ ನಿಜಕ್ಕೂ ನಮಗೂ ನೋವಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X