ಆಹಾರ ಪೊಟ್ಟಣ ಕಟ್ಟಲು ದಿನಪತ್ರಿಕೆ ಬಳಸದಿರಿ; ಎಫ್‌ಎಸ್‌ಎಸ್‌ಎಐ ಎಚ್ಚರಿಕೆ

Date:

Advertisements

ಆಹಾರ ಪದಾರ್ಥಗಳನ್ನು ಪೊಟ್ಟಣ ಕಟ್ಟಲು ಪತ್ರಿಕೆಗಳನ್ನು ಬಳಸಬಾರದು ಎಂದು ಎಫ್‌ಎಸ್‌ಎಸ್‌ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಜಿ. ಕಮಲಾ ವರ್ಧನ ರಾವ್ ಎಚ್ಚರಿಸಿದ್ದಾರೆ.

ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಬಡಿಸಲು ಮತ್ತು ಸಂಗ್ರಹಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು. ಆಹಾರವನ್ನು ಸುತ್ತುವ ಅಥವಾ ಪ್ಯಾಕೇಜಿಂಗ್ ಮಾಡಲು ಪತ್ರಿಕೆಗಳನ್ನು ಬಳಸುವುದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಇದರಿಂದಾ ಉಂಟಾಗಬಹುದಾದ ಆರೋಗ್ಯ ಅಪಾಯಗಳನ್ನು ಸಹ ಸೂಚಿಸಿದ್ದಾರೆ.

ಪತ್ರಿಕೆಗಳಲ್ಲಿ ಬಳಸುವ ಶಾಯಿ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಜೈವಿಕ ಸಕ್ರಿಯ ವಸ್ತುಗಳನ್ನು ಒಳಗೊಂಡಿದೆ. ಇದು ಆಹಾರವನ್ನು ಕೆಡಿಸುತ್ತದೆ ಮತ್ತು ಸೇವಿಸಿದಾಗ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಪ್ರಿಂಟಿಂಗ್ ಇಂಕ್‌ಗಳು ಸೀಸ ಮತ್ತು ಭಾರ ಲೋಹಗಳನ್ನು ಒಳಗೊಂಡಂತೆ ರಾಸಾಯನಿಕಗಳನ್ನು ಒಳಗೊಂಡಿರಬಹುದು. ಅವು ಆಹಾರಕ್ಕೆ ಪದಾಋಥಗಳನ್ನು ಸೇರಿಕೊಳ್ಳಬಹುದು. ಕಾಲಾನಂತರದಲ್ಲಿ ಗಂಭೀರವಾದ ಆರೋಗ್ಯ ಅಪಾಯಗಳನ್ನು ಉಂಟುಮಾಡಬಹುದು.

Advertisements

ಅಲ್ಲದೆ, ಪತ್ರಿಕೆ ವಿತರಣೆಯ ಸಮಯದಲ್ಲಿ ಪತ್ರಿಕೆಗಳು ಸಾಮಾನ್ಯವಾಗಿ ವಿವಿಧ ಪರಿಸರ ಕ್ಕೆ ತೆರೆದುಕೊಂಡಿರುತ್ತವೆ. ಆವೇಳೆ ಅವು ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ರೋಗಕಾರಕಗಳಿಂದ ಮಲೀನವಾಘಿರುತ್ತವೆ. ಅದು ಆಹಾರಕ್ಕೆ ವರ್ಗಾವಣೆಯಾಗಬಹುದು. ಇದು ಆಹಾರದಿಂದ ಹರಡಬಹುದಾದ ಕಾಯಿಲೆಗಳಿಗೆ ಕಾರಣವಾಗಬಹುದು ಎನ್ನುತ್ತದೆ ಏಫ್‌ಎಸ್‌ಎಸ್‌ಎಐ ಹೇಳಿದೆ.

ಎಫ್‌ಎಸ್‌ಎಸ್‌ಎಐ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಾವಳಿಗಳು, 2018ನ್ನು ಸೂಚಿಸಿದೆ, ಇದು ಆಹಾರವನ್ನು ಸಂಗ್ರಹಿಸಲು ಮತ್ತು ಸುತ್ತಲು ಪತ್ರಿಕೆಗಳು ಅಥವಾ ಅಂತಹುದೇ ವಸ್ತುಗಳನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ.

ಈ ನಿಯಮಾವಳಿಯ ಪ್ರಕಾರ, ವಾರ್ತಾಪತ್ರಿಕೆಗಳನ್ನು ಆಹಾರವನ್ನು ಸುತ್ತಲು, ಮುಚ್ಚಲು ಅಥವಾ ಬಡಿಸಲು ಬಳಸಬಾರದು ಅಥವಾ ಕರಿದ ಆಹಾರದಿಂದ ಹೆಚ್ಚುವರಿ ಎಣ್ಣೆಯನ್ನು ಹೀರಿಕೊಳ್ಳಲು ಬಳಸಬಾರದು. ಗ್ರಾಹಕರ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಜವಾಬ್ದಾರಿಯುತ ಪ್ಯಾಕೇಜಿಂಗ್ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಂತೆ ಎಲ್ಲಾ ಆಹಾರ ಮಾರಾಟಗಾರರನ್ನು ರಾವ್‌ ಅವರು ಒತ್ತಾಯಿಸಿದರು.

ಎಫ್‌ಎಸ್‌ಎಸ್‌ಎಐ ದೇಶಾದ್ಯಂತದ ಗ್ರಾಹಕರು, ಆಹಾರ ಮಾರಾಟಗಾರರು ಆಹಾರ ಪ್ಯಾಕೇಜಿಂಗ್ ವಸ್ತುವಾಗಿ ಪತ್ರಿಕೆಗಳ ಬಳಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಒತ್ತಾಯಿಸಿದೆ. ಗ್ರಾಹಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಕಾಪಾಡಲು, ಸುರಕ್ಷಿತ ಮತ್ತು ಒಪ್ಪಿಗೆ ಪಡೆದಿರುವ ಆಹಾರ ಪ್ಯಾಕೇಜಿಂಗ್ ಸಾಮಗ್ರಿಗಳು ಮತ್ತು ಉತ್ತಮ ಆಹಾರದ ಕಂಟೈನರ್‌ಗಳನ್ನು ಬಳಸಲು ಶಿಫಾರಸು ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X