ದಾವಣಗೆರೆ | ಶಿಕ್ಷಕರ ಸಂಘರ್ಷ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

Date:

Advertisements

ಸರ್ಕಾರಿ ಶಾಲೆಯ ಶಿಕ್ಷಕಿಯರ ನಡುವಿನ ಸಂಘರ್ಷಕ್ಕೆ ಬೇಸತ್ತ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶಾಲೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉರುಲಕಟ್ಟೆ ಗ್ರಾಮದಲ್ಲಿ ನಡೆದಿದೆ.

“ಉರುಲಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಜಯಮ್ಮ‌ ಎಂಬುವವರು ಸಮಯಕ್ಕೆ ಸರಿಯಾಗಿ ಶಾಲೆಗೆ ಬರುತ್ತಿಲ್ಲ. ಯಾವಾಗೆಂದರೆ ಆಗ ಶಾಲೆಗೆ ಬರುತ್ತಾರೆ. ಬಂದಾಗಲೂ ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರ ಜೊತೆ ಗಲಾಟೆ ಮಾಡುತ್ತಾರೆ. ಮಕ್ಕಳಿಗೆ ಬುದ್ಧಿ ಹೇಳಬೇಕಾದ ಶಿಕ್ಷಕರೇ ಸಂಕುಚಿತವಾಗಿ ವರ್ತಿಸುತ್ತಿದ್ದಾರೆ” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿದ್ದಾರೆ.

“ಶಾಲೆ ಸಮಯ ಬೆಳಿಗ್ಗೆ 10 ಗಂಟೆಗೆ ಶಿಕ್ಷಕರು ಬರಬೇಕು. ಆದರೆ, ಮುಖ್ಯ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ವಿದ್ಯಾರ್ಥಿಗಳಿಗೆ ಪಾಠ ಬೋಧಿಸುತ್ತಿಲ್ಲ. ಮುಖ್ಯ ಶಿಕ್ಷಕಿ ಮತ್ತು ಸಹ ಶಿಕ್ಷಕಿ ನಡುವೆ ಹೊಂದಾಣಿಕೆ ಇಲ್ಲ” ಎಂದು ಆರೋಪಿಸಿದ್ದಾರೆ.

Advertisements
ಬಿಸಿಲಲ್ಲಿ ಕುಳಿತ ಮಕ್ಕಳು

“ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಪಾಠ ಮಾಡುವುದಿಲ್ಲ. ಸಣ್ಣ ವಿಷಯಕ್ಕೂ ಜಗಳವಾಡುತ್ತಾರೆ. ಇಂತಹ ಶಿಕ್ಷಕಿಯರು ಒಟ್ಟಿಗೆ ಇದ್ದರೆ ಮಕ್ಕಳಿಗೆ ಅನ್ಯಾಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ. ಹೀಗಾಗಿ ಇಬ್ಬರನ್ನೂ ವರ್ಗಾವಣೆ ಮಾಡಿ. ಇವರ ಸಹವಾಸವೇ ಬೇಡ. ಬೇರೆ ಶಿಕ್ಷಕರನ್ನು ನೇಮಿಸಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ರಾಯಚೂರು: ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ಪ್ರತಿಭಟನೆ

ಪ್ರತಿಭಟನೆ ನಡೆಯುತ್ತಿದ್ದ ಉರುಲಕಟ್ಟೆ ಗ್ರಾಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಈ. ಹಾಲಮೂರ್ತಿ ಭೇಟಿ ನೀಡಿದ್ದು, ಮುಖ್ಯ ಶಿಕ್ಷಕಿ, ಸಹ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರ ಜೊತೆಗೆ ಸಭೆ ನಡೆಸಿದ್ದಾರೆ.

“ಶಿಕ್ಷಕರು ಮಕ್ಕಳ ಮುಂದೆ ಜಗಳವಾಡಿದರೆ, ಮಕ್ಕಳೂ ಕೂಡ ಹಾಗೆ ಮಾಡುತ್ತಾರೆ. ಶಿಕ್ಷಕರು ತಾಳ್ಮೆಯಿಂದ ವರ್ತಿಸಬೇಕು. ಸಮಯಕ್ಕೆ ಸರಿಯಾಗಿ ಶಾಲೆಗೆ ಬಂದು ಪಾಠ ಮಾಡಬೇಕು” ಎಂದು ಶಿಕ್ಷಕರಿಗೆ ಶಿಕ್ಷಣಾಧಿಕಾರಿ ಬುದ್ಧಿ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X