ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ ಸತೀಶ್ ಗೌತಮ್

Date:

Advertisements

ಉತ್ತರ ಪ್ರದೇಶದ ಬಿಜೆಪಿ ಸಂಸದ ಸತೀಶ್ ಗೌತಮ್ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಶಾಸಕಿಯೋರ್ವರ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.

ಉತ್ತರ ಪ್ರದೇಶದ ಅಲಿಘಢ್‌ನ ಕೋಲ್ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಗೌತಮ್ ಅವರು ವೇದಿಕೆಯಲ್ಲಿದ್ದಾಗ ಶಾಸಕಿ ಮುಕ್ತಾ ರಾಜಾ ಅವರ ಭುಜದ ಮೇಲೆ ಕೈ ಹಾಕಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದನ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸಂಸದನ ಈ ನಡೆಯ ಬಳಿಕ ಶಾಸಕಿಗೆ ಇರುಸುಮುರುಸು ಉಂಟಾದ ಬಳಿಕ ತನ್ನ ಸ್ಥಾನವನ್ನು ಬದಲಾಯಿಸಿದರು ಎಂದು ವರದಿಯಾಗಿದೆ. ಸೆಪ್ಟೆಂಬರ್ 25 ರಂದು ನಡೆದ ಈ ಬೆಳವಣಿಗೆಯು, ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆದ ನಂತರ ಬೆಳಕಿಗೆ ಬಂದಿದೆ.

Advertisements

ವೇದಿಕೆಯಲ್ಲಿ ಉತ್ತರ ಪ್ರದೇಶದ ಸಾರಿಗೆ ಸಚಿವ ದಯಾಶಂಕರ್ ಸಿಂಗ್, ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, ಮಾಜಿ ಮೇಯರ್ ಶಕುಂತಲಾ ಭಾರತಿ, ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಪೂನಂ ಬಜಾಜ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಜಯ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದ ವೇದಿಕೆಯಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಬೆಳವಣಿಗೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ಬರೌಲಿ ಠಾಕೂರ್ ಜೈವೀರ್ ಸಿಂಗ್ ಅವರು, ಶಾಸಕಿಯೊಂದಿಗೆ ಬಿಜೆಪಿ ಸಂಸದರ ನಡೆಯನ್ನು ಗಮನಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವಿಡಿಯೋ ವೈರಲ್ ಆದ ಬಳಿಕ ಇದನ್ನು ಖಂಡಿಸಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ವಕ್ತಾರ ಸುರೇಂದ್ರ ರಜಪೂತ್, “ಇದು ಸುಸಂಸ್ಕೃತ ಬಿಜೆಪಿಯ ವಾಸ್ತವ ಸಂಸ್ಕೃತಿ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಕಾಂಗ್ರೆಸ್, “ಕಾರ್ಯಕ್ರಮದ ಮಧ್ಯೆ ಶಾಸಕಿ ಮುಕ್ತಾ ರಾಜಾ ಅವರಿಗೆ ಬಹಿರಂಗವಾಗಿ ಕಿರುಕುಳ ನೀಡುತ್ತಿರುವ ಅಲಿಘರ್ ಸಂಸದ ಸತೀಶ್ ಗೌತಮ್ ಅವರಿಂದಲೇ ಈ ರೀತಿ ದೌರ್ಜನ್ಯ ಆಗುವುದಾದರೆ ಸಾಮಾನ್ಯ ಮಹಿಳೆಯರು ಮತ್ತು ಹುಡುಗಿಯರು ಸುರಕ್ಷಿತರಾಗುತ್ತಾರೆಯೇ?” ಎಂದು ಪ್ರಶ್ನಿಸಿದೆ‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X