ಬ್ರಿಟನ್‌ | ಗುರುದ್ವಾರ ಪ್ರವೇಶಿಸದಂತೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ತಡೆದ ಖಲಿಸ್ತಾನಿ ಬೆಂಬಲಿಗರು

Date:

Advertisements

ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಬೆಂಬಲಿಗರು ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದಿರುವ ದೃಶ್ಯ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿದೆ.

ಖಲಿಸ್ತಾನಿಗಳ‌ ಮುಖಂಡ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಇತ್ತೀಚೆಗೆ ಮಾಡಿದ ಆರೋಪದ ನಡುವೆಯೇ ಈ ಘಟನೆ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಖಲಿಸ್ತಾನ್ ಪರ ಕಾರ್ಯಕರ್ತರೊಬ್ಬರು ದೊರೈಸ್ವಾಮಿ ಅವರನ್ನು ಆಲ್ಬರ್ಟ್ ಡ್ರೈವ್‌ನಲ್ಲಿರುವ ಗ್ಲಾಸ್ಗೋ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆಯುತ್ತಿರುವುದು ಕಂಡುಬಂದಿದೆ.

Advertisements

ಗುರುದ್ವಾರದ ವ್ಯವಸ್ಥಾಪನಾ ಸಮಿತಿಯು ಭಾರತೀಯ ಹೈಕಮಿಷನರ್ ಅವರನ್ನು ಆಹ್ವಾನಿಸಿದ್ದ ಹಿನ್ನೆಲೆಯಲ್ಲಿ ಭೇಟಿ ನೀಡಲು ತೆರಳಿದ್ದ ವೇಳೆ ಈ ಬೆಳವಣಿಗೆ ನಡೆದಿದೆ.

ಅಲ್ಲದೇ, ವಿಡಿಯೋದಲ್ಲಿ ಗುರುದ್ವಾರ ವ್ಯವಸ್ಥಾಪಕ ಸಮಿತಿಯ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವುದು ಕೂಡ ದಾಖಲಾಗಿದೆ.

ಈ ಬಗ್ಗೆ ಭಾರತವು ತಕ್ಷಣ ಪ್ರತಿಕ್ರಿಯೆ ನೀಡಿಲ್ಲದಿದ್ದರೂ, ಹೈಕಮಿಷನರ್ ಅವರ ಭದ್ರತೆಗೆ ಸಂಬಂಧಿಸಿದ್ದಾಗಿರುವುದರಿಂದ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ “ಭಾರತದ ಸರ್ಕಾರಿ ಏಜೆಂಟರು” ಶಾಮೀಲಾಗಿದ್ದಾರೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೊ ಆರೋಪಿಸಿದ ನಂತರ ಭಾರತ-ಕೆನಡಾ ನಡುವಿನ ಸಂಬಂಧ ಹಳಸಿದೆ. ಟ್ರುಡೊ ಅವರ ಆರೋಪಗಳನ್ನು “ಅಸಂಬದ್ಧ” ಎಂದು ತಿರಸ್ಕರಿಸಿದ್ದ ಭಾರತವು, ಕೆನಡಾ ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡುತ್ತಿದೆ ಎಂದು ಆರೋಪಿಸಿತ್ತು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಗಾಝಾದಲ್ಲಿ ವಿದೇಶಿ ಮಾಧ್ಯಮ ಪ್ರವೇಶ ನಿರ್ಬಂಧ ತೆರವುಗೊಳಿಸಿ: ಇಸ್ರೇಲ್‌ಗೆ 27 ದೇಶಗಳ ಒಕ್ಕೂಟ ಆಗ್ರಹ

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಸರ್ಕಾರವು ವಿಧಿಸಿರುವ ವಿದೇಶಿ ಪತ್ರಕರ್ತರ ನಿರ್ಬಂಧವನ್ನು ತೆಗೆದುಹಾಕಿ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X