‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

Date:

Advertisements
  • ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ
  • ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ?

ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ ರಾಜ್ಯ ಸರ್ಕಾರದ ಪರಿಸ್ಥಿತಿ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಾಗ ಇವರನ್ನು ಕಳ್ಳರು ಅಂದಿದ್ದೆ, ಈಗ ದಡ್ಡರು ಎನ್ನಬೇಕಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಟೀಕಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಡಿಕೆ ಶಿವಕುಮಾರ್‌ ಕುತಂತ್ರದಿಂದ ರಾಜ್ಯದ ಜನ ಸಮಸ್ಯೆ ಅನುಭವಿಸುವಂತಾಗಿದೆ. ನೀರು ಬಿಟ್ಟ ಮೇಲೆ ಸಭೆ ಮಾಡಿದರೆ ಏನು ಪ್ರಯೋಜನ” ಎಂದು ವಾಗ್ದಾಳಿ ನಡೆಸಿದರು.

“ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ. ಎಲ್ಲ ರಾಜಕೀಯ ಪಕ್ಷಗಳು, ಸಂಸದರು, ರೈತರ ಸಭೆ ಮಾಡಬಹುದಿತ್ತು. ಕಳ್ಳತನದಲ್ಲಿ ತಮಿಳುನಾಡಿಗೆ ನೀರು ಬಿಟ್ಟರು” ಎಂದರು.

Advertisements

“ನಾವು ಜನರ ಜೊತೆ ಇದ್ದೇವೆ ಎಂದು ಈಗ ಹೇಳುತ್ತಿದ್ದಾರೆ. ಇದಕ್ಕಿಂತ ಅನ್ಯಾಯ ಮತ್ತೇನಿದೆ. ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದೆ ಸಿಎಂ ನೀರು ಬಿಟ್ಟಿದ್ದ ಉದಾಹರಣೆ ಇದೆ. ಇವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು” ಎಂದು ಆಗ್ರಹಿಸಿರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಷ್ಟು ಮದ್ಯದಂಗಡಿಗಳ ಸಿದ್ದು ಕ್ರಮ ಸಮಾಜಘಾತಕ- ಕೈಬಿಡುತ್ತೇವೆಂದು ಆರನೆಯ ‘ಗ್ಯಾರಂಟಿ’ ನೀಡಲಿ

“ರಾಜ್ಯದಲ್ಲಿ ಬರದಿಂದ ಜನ ತತ್ತರಿಸಿ ಹೋಗಿದ್ದಾರೆ. ಎಷ್ಟು ಕಡೆ ಬರ ಬಂದಿದೆ. ಬೆಳೆ ನಷ್ಟ ಎಷ್ಟು ಅಂದು ಸಮೀಕ್ಷೆ ಕೂಡ ಮಾಡಿಲ್ಲ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸುವುದೇ ಇವರ ಕೆಲಸ. ಈಗಲೂ ಎಲ್ಲರನ್ನು ಕರೆದು, ಸಭೆ ಮಾಡಿ, ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿದರು.

“ಕೇಂದ್ರದ ಬಿಜೆಪಿ ನಾಯಕರೂ ರಾಜ್ಯದ ಬೆಳವಣಿಗೆ ಗಮನಿಸುತ್ತಿದ್ದಾರೆ. ಆದಷ್ಟು ಬೇಗ ವಿರೋಧ ಪಕ್ಷದ ನಾಯಕರ ಆಯ್ಕೆ ಆಗಲಿದೆ. ನಮ್ಮ ತಪ್ಪೇನಾದರೂ ಇದ್ದರೆ ಕರೆದು ಬುದ್ಧಿ ಹೇಳಲಿ. ಕಾಂಗ್ರೆಸ್‌ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X