ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

Date:

Advertisements

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ ಕೇವಲ 4 ತಾಲೂಕುಗಳಲ್ಲಿ ಮಾತ್ರವೇ ಅತ್ಯಧಿಕ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮಳೆಯ ಪಟ್ಟಿ ಬಿಡುಗಡೆ ಮಾಡಿರುವ ಇಲಾಖೆ, “ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು, ರಾಮನಗರ, ಕೋಲಾರ, ಬಳ್ಳಾರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳು ಮಳೆ ಕೊರತೆ ಪಟ್ಟಿಯಲ್ಲಿವೆ. 23 ಜಿಲ್ಲೆಗಳ 146 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. 8 ಜಿಲ್ಲೆಗಳ 86 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ನಿನ್ನೆಯ ಮಳೆಯ ನಂತರ ದಕ್ಷಿಣ ಕನ್ನಡ ಜಿಲ್ಲೆ ಸಾಧಾರಣ ಮಳೆಯ ಪಟ್ಟಿಗೆ ಸೇರಿದೆ. ಈ ಬಾರಿಯ ಮುಂಗಾರು ಮಳೆಯು ವಿಶೇಷವಾಗಿ ಆಗಸ್ಟ್‌ನಲ್ಲಿ ರೈತರಿಗೆ ಭಾರೀ ನಷ್ಟ ಮತ್ತು ಸಂಕಟವನ್ನುಂಟು ಮಾಡಿದೆ” ಎಂದು ತಿಳಿಸಿದೆ.

“ಬೆಂಗಳೂರಿನಲ್ಲಿ ಸೆಪ್ಟೆಂಬರ್‌ನಲ್ಲಿ ಸರಾಸರಿ 208.3 ಮಿ.ಮೀಗೆ ಬದಲಾಗಿ 248.4 ಮಿಲಿ ಮೀಟರ್ ಮಳೆಯಾಗಿದೆ. ಮುಂಗಾರು ಆರಂಭವಾದಗಿನಿಂದ ಅಂತ್ಯದವರೆಗೆ ಬೆಂಗಳೂರಿನಲ್ಲಿ ಸರಾಸರಿ ಒಟ್ಟು ಮಳೆ ಪ್ರಮಾಣ 597.7 ಮಿ.ಮೀ. ಆಗಬೇಕಿತ್ತು. ಆದರೆ, 474.8 ಮಿಮೀ ಮಳೆಯಾಗಿದೆ. ಒಟ್ಟಾರೆ ವರ್ಷದಲ್ಲಿ ಆಗಬೇಕಿದ್ದ ಸರಾಸರಿ ಮಳೆ 980 ಮಿ.ಮಿ. ಆದರೆ ಪ್ರಸ್ತುತ ವರ್ಷದಲ್ಲಿ 817.6 ಮಿ.ಮೀ ಮಳೆಯಾಗಿದೆ” ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

Advertisements

ಈ ಸುದ್ದಿ ಓದಿದ್ದೀಯಾ? ಬೆಳಗಾವಿ | ಮೋಡ ಬಿತ್ತನೆ ಕಾರ್ಯಾಚರಣೆ ಆರಂಭ; ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಯತ್ನ

“ಮುಂಬರುವ ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X