ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

Date:

Advertisements

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು, ಮದ್ಯವಲ್ಲ. ಸರ್ಕಾರ ಜನರ ಮೂಲಭೂತ ಸೌಕರ್ಯಗಳನ್ನು ಬಲಿಷ್ಠಗೊಳಿಸಬೇಕೇ ಹೊರತು, ಮದ್ಯದ ನಶಯನ್ನಲ್ಲ ಎಂದು ಸ್ಲಂ ಜನಾಂದೋಲನ ಸಂಘಟನೆಯ ಸಂಚಾಕಲ ಎ ನರಸಿಂಹಮೂರ್ತಿ ಹೇಳಿದ್ದಾರೆ.

ತುಮಕೂರಿನ ಎಸ್.ಎನ್ ಪಾಳ್ಯದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯು ಜಾಗೃತಿ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಅವರು ಮಾತನಾಡಿದರು.

“ರಾಜ್ಯ ಸರ್ಕಾರದ ಅಬಕಾರಿ ಸಚಿವರು ಒಂದು ಸಾವಿರ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡುವ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದು ಬಡಜನರ ವಿರೋಧಿ ನೀತಿಯಾಗಿದೆ. ವಿಶೇಷವಾಗಿ ನಗರಪ್ರದೇಶಗಲ್ಲಿ ಕೂಲಿ ಮಾಡುವ ಬಡಜನರ ನೆಮ್ಮದಿಯ ಜೀವನವನ್ನು ಹಾಳು ಮಾಡುತ್ತದೆ. ಸರ್ಕಾರವು ಜನತೆಯನ್ನು ನಶೆಗೆ ತಳ್ಳುವ ನಡೆಯಿಂದ ಹಿಂದೆ ಬರಬೇಕು. ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರ – ಈ ಅಂಶಗಳನ್ನು ಸರ್ಕಾರಗಳು ಬಲಿಷ್ಠಗೊಳಿಸಬೇಕೆ ಹೊರತು ಮಧ್ಯದ ನಶೆಯನ್ನಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

ಸಂಘಟನೆಯ ಮುಖಂಡ ಗುಲ್ನಾಜ್ ಮಾತನಾಡಿ, “ಸರ್ಕಾರದ ಗೃಹಲಕ್ಷ್ಮೀ, ಗೃಹ ಜ್ಯೋತಿ ಮತ್ತು ಅನ್ನ ಭಾಗ್ಯದಿಂದ ಬಡಜನರಿಗೆ ಅನುಕೂಲವಾಗಿದೆ. ಗಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಮುಂದಾದರೇ ನಮ್ಮ ಕುಟುಂಬದ ಆದಾಯ ಲಿಕ್ಕರ್ ಪಾಲಾಗುತ್ತದೆ. ಹಾಗಾಗಿ, ರೇಷನ್ ಅಂಗಡಿಗಳನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ಚಿಂತಿಸಬೇಕು” ಎಂದರು.

ಸಭೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಅರುಣ್, ಉಪಾಧ್ಯಕ್ಷ ಶಂಕರಯ್ಯ, ತಿರುಮಲಯ್ಯ, ಕೃಷ್ಣಮೂರ್ತಿ, ಮುಬಾರಕ್, ಮೋಹನ್ಕುಮಾರ್, ಶಿವಪ್ಪ, ಜಯಣ್ಣ, ಸೈಯದ್ಪೀರ್, ರಫೀಕ್, ಹನುಮಕ್ಕ, ಲಕ್ಷ್ಮಮ್ಮ, ಜಯಮ್ಮ, ಲಲಿತಮ್ಮ, ರೆಹಮಾನ್, ಮುಮ್ತಾಜ್ ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಅರುಣ್, ಮಾಸ್‌ ಮೀಡಿಯಾ ವಾಲೆಂಟಿಯರ್, ತುಮಕೂರು 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X