ಬೆಂಗಳೂರು | ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ;‌ ವಾಹನ ಮಾಲೀಕರಲ್ಲಿ ಜಾಗೃತಿ ಕೊರತೆ

Date:

Advertisements

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲಾದ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್ಎಸ್ಆರ್‌ಪಿ) ಅಂಟಿಸುವುದನ್ನು ರಾಜ್ಯ ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ. ಆದರೂ, ಈವರೆಗೆ ಕೇವಲ 30,000 ವಾಹನ ಮಾಲೀಕರು ತಮ್ಮ ನಂಬರ್ ಪ್ಲೇಟ್‌ಗಳನ್ನು ಬದಲಾಯಿಸಿದ್ದಾರೆ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

“ರಾಜ್ಯಾದ್ಯಂತ ಸುಮಾರು ಎರಡು ಕೋಟಿ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಪಡೆಯಲು ಸುಮಾರು 45 ದಿನಗಳು ಉಳಿದಿವೆ. ಈ ಗಡುವಿನೊಳಗೆ ಹೊಸ ನಂಬರ್ ಪ್ಲೇಟ್ ಅಳವಡಿಕೆ ನಡೆಯಬೇಕಾದರೆ, ನವೆಂಬರ್ 17 ರವರೆಗೆ ಪ್ರತಿದಿನ 4 ಲಕ್ಷಕ್ಕೂ ಹೆಚ್ಚು ವಾಹನಗಳು ನೋಂದಾಯಿಸಿಕೊಂಡು ಎಚ್ಎಸ್ಆರ್‌ಪಿ ಪ್ಲೇಟ್ ಅಂಟಿಸಬೇಕು. ಫಲಕಗಳನ್ನು ಅಂಟಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಇಲ್ಲದ ಕಾರಣ ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್‌ಗಳನ್ನೇ ಮುಂದುವರಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರದ ರಸ್ತೆ ಸಮಸ್ಯೆಗೆ ಮಂಗಳೂರಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಯುವಕ!

Advertisements

ಮೂಲ ಉಪಕರಣ ತಯಾರಕರ (ಒಇಎಂ) ಅಧಿಕೃತ ವಿತರಕರಿಂದ ಪ್ರತ್ಯೇಕವಾಗಿ ಎಚ್ಎಸ್ಆರ್‌ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆಗಸ್ಟ್ 17 ರಂದು ಅಧಿಸೂಚನೆ ಹೊರಡಿಸಿದೆ. ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್‌ ಬದಲಿಸಿಕೊಳ್ಳಲು ನವೆಂಬರ್ 17 ಕೊನೆಯ ದಿನಾಂಕವಾಗಿದೆ. ಈ ದಿನಾಂಕದ ಬಳಿಕ, ಎಚ್ಎಸ್ಆರ್‌ಪಿ ಪ್ಲೇಟ್ ಹೊಂದಿರದ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿದುಬಂದಿದೆ.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಿದ್ಧತೆ ಇಲ್ಲದೇ ಕಾನೂನು ಮಾಡಿದರೆ ಹೀಗೇ ಆಗುವುದು. ಸರಕಾರಕ್ಕೆ ಕೇವಲ ದಂಡ ಬೇಕಿದೆ.
    ಇದೇ RTO ರಸ್ತೆ ಬದಿಯಲ್ಲಿ ಕ್ಯಾಂಪ್ ಹಾಕಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬಹುದಾಲ್ಲ ??
    ಆದರೆ eke ಮಾಡುವುದಿಲ್ಲ.
    ಕೊನೆ ಕೊನೆಗೆ ಎರಡು ಮೂರು ಪಟ್ಟು ಜಾಸ್ತಿ ಕೊಟ್ಟು number plate change
    ಮಾಡಿಸುವ ಪರಿಸ್ಥಿತಿ ಬರಬಹುದು. Helmet vishayadalli
    400, 500 ರೂಪಾಯಿ ಹೆಲ್ಮೆಟ್ ಕೊಡುವ ಬದಲು ಹೆಲ್ಮೆಟ್ ಹಾಕಿಲ್ಲ ಅಂತ 1000 ದಂಡ ಹಾಕಲ್ಲವೆ ? Naavu
    ಕೆಲವರು ಕೊಡುವ ಲಿಂಕ್ ಮೂಲಕ ಬುಕ್ ಮಾಡೋಣ ಅಂದರೆ ಡೀಟೇಲ್ಸ್ ರೆಕಾರ್ಡ್ ಆಗಲ್ಲ. ಏನು ಮಾಡಬೇಕು. ? ಜನ ಸಾಮಾನ್ಯರಿಗೆ ತಿಳುವಳಿಕೆ ಇಲ್ಲ ಅನ್ನುವುದು ಒಂದು ಸಬೂಬು. ಮೊದಲು ಫೈನ್ ನಂತರ ರಾಜಕೀಯ ಎಂಟ್ರಿ ನಂತರ ಫೈನ್ ನಲ್ಲಿ ರಿಯಾಯಿತಿ. ಇದೇ ಜೀವನ..

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X